Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ರಕ್ತದಾನದಿಂದ ಮಾನವೀಯ ಸಮಾಜ ಕಾಣಲು ಸಾಧ್ಯ : ಎಸ್. ಜಯಕರ ಶೆಟ್ಟಿ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ – ಕೋಟೇಶ್ವರ ಘಟಕ ಇವರ ನೇತೃತ್ವದಲ್ಲಿ ಅಭಯಹಸ್ತ ಹೆಲ್ಪ್ ಲೈನ್ ಉಡುಪಿ, ರೋಟರಿ ಕ್ಲಬ್ ತೆಕ್ಕಟ್ಟೆ, ಹೆಲ್ಪಿಂಗ್ ಹ್ಯಾಂಡ್ ಕುಂದಾಪುರ, ಜೈ ಕುಂದಾಪ್ರ ಸೇವಾ ಟ್ರಸ್ಟ್ ರಿ, ಕುಂದಾಪುರ ಇವರ ಜಂಟಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಭಾನುವಾರ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ನಡೆಯಿತು.

ಭಾರತೀಯ ರೆಡ್‍ಕ್ರಾಸ್ ಸೊಸೈಟಿ ಕುಂದಾಪುರ ಇದರ ಚೇರ್‍ಮನ್ ಎಸ್ ಜಯಕರ ಶೆಟ್ಟಿ ಬೃಹತ್ ರಕ್ತದಾನ ಶಿಬಿರ ಉದ್ಘಾಟಿಸಿ, ಮಾತನಾಡಿ ಸಾಮಾನ್ಯವಾಗಿ ರಸ್ತೆ ಅಪಘಾತದಲ್ಲಿ ರಕ್ತಸ್ರಾವಗೊಂಡ ರೋಗಿಗಳು ಮತ್ತು ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರಿಗೆ ರಕ್ತದ ಅವಶ್ಯಕತೆ ಇರುತ್ತದೆ. ಇಂಥ ಸಂದರ್ಭದಲ್ಲಿ ರಕ್ತದಾನಿಗಳು ನೀಡುವ ರಕ್ತ ಮಹತ್ವ ಪಡೆಯುತ್ತದೆ. ವೈದ್ಯಕೀಯ ತಜ್ಞರ ಪ್ರಕಾರ ಒಬ್ಬರ ರಕ್ತದಾನದಿಂದ ಮೂರು ಜನರ ಪ್ರಾಣ ಉಳಿಸಬಹುದಾಗಿದೆ ಎಂದರು.

Advertisement. Scroll to continue reading.

ಮೊಗವೀರ ಯುವ ಸಂಘಟನೆ ರಿ ಉಡುಪಿ ಜಿಲ್ಲೆ – ಕೋಟೇಶ್ವರ ಘಟಕದ ಅಧ್ಯಕ್ಷ ಸುನಿಲ್ ಬಿ ನಾಯ್ಕ್ ರಕ್ತದಾನ ಶಿಬಿರದ ಅಧ್ಯಕ್ಷತೆ ವಹಿಸಿ, ಮಾತನಾಡಿ ನಾವೆಲ್ಲರು ಒಂದೆ, ನಮ್ಮೆಲ್ಲರ ನರಗಳಲ್ಲಿ ಹರಿಯುತ್ತಿರುವ ರಕ್ತವು ಒಂದೆ, ಹಿಂಗಿರುವಾಗ ಯಾವುದೇ ವ್ಯಕ್ತಿ ಇನ್ನೊಬ್ಬರ ಜೀವ ಉಳಿಸಲು ಸ್ವಯಂ ಪ್ರೇರಿತನಾಗಿ ರಕ್ತದಾನ ಮಾಡಿದರೆ, ಮಾನವೀಯ ಸಮಾಜ ಕಾಣಲು ಸಾಧ್ಯ ಎಂದರು.

ಅಭಯಹಸ್ತ ಹೆಲ್ಪ್ ಲೈನ್ ಉಡುಪಿ ಅಧ್ಯಕ್ಷ ಸತೀಶ್ ಸಾಲಿಯಾನ್ ಮಣಿಪಾಲ ಇವರಿಗೆ ರಕ್ತದಾನ ಶಿಬಿರದಲ್ಲಿ ಸನ್ಮಾನಿಸಿ ಗೌರವಿಸಲಾಯಿತು.

ಈ ಸಂದರ್ಭ ರೋಟರಿ ಕ್ಲಬ್ ತೆಕ್ಕಟ್ಟೆ ಅಧ್ಯಕ್ಷ ಮಂಜುನಾಥ ಕಾಂಚನ್, ಜೈ ಕುಂದಾಪ್ರ ಸೇವಾ ಟ್ರಸ್ಟ್‍ನ ಪ್ರಧಾನ ಕಾರ್ಯದರ್ಶಿ ಜಯರಾಜ್ ಪಡುಕೆರೆ, ಹೆಲ್ಪಿಂಗ್ ಹ್ಯಾಂಡ್ಸ್ ಕುಂದಾಪುರ ಗೌರವ ಸಲಹೆಗಾರ ರವೀಂದ್ರ ರಟ್ಟಾಡಿ, ಮೊಗವೀರ ಮಹಾಜನ ಸಂಘ ಶಿವಮೊಗ್ಗ ಉಪಾಧ್ಯಕ್ಷ ರಾಮ ಕುಂದರ್ ಮೊಗಬೆಟ್ಟು, ಮೊಗವೀರ ಯುವ ಸಂಘಟನೆ ರಿ ಉಡುಪಿ ಜಿಲ್ಲೆ – ಕೋಟೇಶ್ವರ ಘಟಕದ ಸ್ಥಾಪಕಾಧ್ಯಕ್ಷ ಸತೀಶ್ ಎಂ ನಾಯ್ಕ್, ಜೇಸಿಐ ವಲಯ 15ರ ವಲಯ ಸಂಯೋಜಕ ಅಶೋಕ್ ತೆಕ್ಕಟ್ಟೆ, ಮೊಗವೀರ ಯುವ ಸಂಘಟನೆ ರಿ ಉಡುಪಿ ಜಿಲ್ಲೆ – ಕೋಟೇಶ್ವರ ಘಟಕದ ನಿಕಟಪೂರ್ವಾಧ್ಯಕ್ಷ ರವೀಶ್ ಎಸ್ ಕೊರವಡಿ ಮೊದಲಾದ

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!