Connect with us

Hi, what are you looking for?

Diksoochi News

ಕರಾವಳಿ

ಉಡುಪಿ : ಸಂಜೀವಿನಿ ಸ್ವಸಹಾಯ ಗುಂಪುಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳ ಮಾರಾಟಕ್ಕಾಗಿ ಸಂಜೀವಿನಿ ವಾರದ ಸಂತೆ ಉದ್ಘಾಟನೆ

0

ವರದಿ : ಬಿ.ಎಸ್.ಆಚಾರ್ಯ

ಉಡುಪಿ : ತೆಂಕನಿಡಿಯೂರು ಗ್ರಾಮ ಪಂಚಾಯತ್ ಸಮುದಾಯ ಭವನದಲ್ಲಿ ಸಂಜೀವಿನಿ ಸ್ವಸಹಾಯ ಗುಂಪುಗಳಿಂದ ತಯಾರಿಸಲ್ಪಟ್ಟ ಉತ್ಪನ್ನಗಳ ಮಾರಾಟಕ್ಕಾಗಿ ‘ಸಂಜೀವಿನಿ ವಾರದ ಸಂತೆ ‘ ಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ .ವೈ .ನವೀನ್ ಭಟ್ ಉದ್ಘಾಟಿಸಿದರು‌. ಬಳಿಕ ಮಾತನಾಡಿದ ಅವರು, ಸಂಜೀವಿನಿ ಸಂಘಗಳು ವಿಶೇಷವಾಗಿ ಗ್ರಾಮೀಣ ಮಹಿಳೆಯರು ಹೊಸ ಜೀವನೋಪಾಯ ಕಂಡುಕೊಂಡು ಸಬಲೀಕರಣಗೊಳ್ಳಬೇಕು. ಅದಕ್ಕೆ ಅವರ ಆಸಕ್ತಿ ಮತ್ತು ಬೇಡಿಕೆಗೆ ಅನುಗುಣವಾಗಿ ಸಂಪೂರ್ಣ ಸಹಕಾರ ನೀಡುತ್ತೇವೆಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕ ಬಾಬು ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಸಂಜೀವಿನಿ ಯೋಜನೆಗೆ ಸರಕಾರದಿಂದ ತುಂಬಾ ಸವಲತ್ತುಗಳು ಮತ್ತು ಮಹಿಳೆಯರಿಗೆ ಆರ್ಥಿಕ ಬಲವರ್ಧನೆಗೆ ಪೂರಕವಾಗಿ ಯೋಜನೆಗಳು ಬರುತ್ತಿದು ಸದುಪಯೋಗ ಪಡೆದುಕೊಳ್ಳಬೇಕು ಎಂದರು.

ತೆಂಕನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಾಯತ್ರಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ   ಬಡಾನಿಡಿಯೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಪ್ರಭಾಕರ ತಿಂಗಳಾಯ, ಕೆಮ್ಮಣ್ಣು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಲತಾ, ಕಲ್ಯಾಣಪುರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೃಷ್ಣ ದೇವಾಡಿಗ, ಸಹಾಯಕ ಯೋಜನಾಧಿಕಾರಿ ಜೇಮ್ಸ್ , ಉಡುಪಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾದಿಕಾರಿ ವಿಜಯಾ ಉಪಸ್ಥಿತರಿದ್ದರು. ಸುಮಾರು 37 ಕ್ಕೂ ಹೆಚ್ಚು ಸ್ವ ಸಹಾಯ ಗುಂಪುಗಳು ತಯಾರಿಸಿದ ಉತ್ಪನ್ನಗಳನ್ನು ಮಾರಾಟ ಮಾಡಲು ಪ್ರತ್ಯೇಕ ವಾರದ ಸಂತೆ ಪ್ರಾರಂಭಿಸುವ ಮೂಲಕ ಜಿಲ್ಲೆಗೆ ಮಾದರಿ ಆಗಿದ್ದು ಮುಂದಿನ ದಿನಗಳಲ್ಲಿ ಎಲ್ಲಾ ಗ್ರಾಮ ಪಂಚಾಯತ್ ಗಳಲ್ಲಿ ಸಂಜೀವಿನಿ ಸಂತೆ ನಡೆಯಲಿದೆ. ಮಹಿಳಾ ಸ್ವಸಹಾಯ ಸಂಜೀವಿನಿ ಒಕ್ಕೂಟಗಳು ಈ ಸಂತೆಯ ಕಲ್ಪನೆಗೆ ಪೂರಕವಾಗಿ ಕೆಲಸ ಮಾಡುತ್ತಿದೆ. ತೆಂಕನಿಡಿಯೂರು ಗ್ರಾಮ ಪಂಚಾಯತ್ ಪಿ. ಡಿ .ಓ .ಸುರೇಶ್ .ಕೆ .ಸ್ವಾಗತಿಸಿದರು .ಎನ್ .ಆರ್ .ಎಲ್ .ಎಮ್ – ನ ಜಿಲ್ಲಾ ಕಾರ್ಯಕ್ರಮ ವ್ಯಸ್ಥಾಪಕರಾದ ಪ್ರಭಾಕರ ಆಚಾರ್ ನಿರೂಪಿಸಿ, ಸಂಜೀವಿನಿ ಒಕ್ಕೂಟದ ಕೋಶಾಧಿಕಾರಿ ರಾಧಾ ವಂದಿಸಿದರು .

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!