Connect with us

Hi, what are you looking for?

Diksoochi News

ಕರಾವಳಿ

ಗಂಗೊಳ್ಳಿ : ಶ್ರೀ ಇಂದುಧರ ದೇವಸ್ಥಾನದ ಆಶ್ರಯದಲ್ಲಿ ಗಾಂಧಿ ಜಯಂತಿ

0

ವರದಿ : ದಿನೇಶ್ ರಾಯಪ್ಪನಮಠ

ಗಂಗೊಳ್ಳಿ : ಗಾಂಧೀಜಿ ಮತ್ತು ಲಾಲ್ ಬಹಾದ್ದೂರ್ ಶಾಸ್ತ್ರಿಯವರ ಜೀವನ ಮೌಲ್ಯಗಳನ್ನು ಎಲ್ಲರೂ ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರಯತ್ನ ನಡೆಸಬೇಕು. ಈ ಇಬ್ಬರು ಮಹಾತ್ಮರ ಕನಸನ್ನು ನನಸಾಗಿಸಲು ಹಾಗೂ ದೇಶದ ಅಭಿವೃದ್ಧಿಗೆ ಎಲ್ಲರೂ ಒಂದಾಗಿ ಮುನ್ನಡೆಯಬೇಕು ಎಂದು ಗಂಗೊಳ್ಳಿ ಗ್ರಾಪಂ ಸದಸ್ಯ ಬಿ.ರಾಘವೇಂದ್ರ ಪೈ ಹೇಳಿದರು.
ಶ್ರೀ ಇಂದುಧರ ದೇವಸ್ಥಾನ ಗಂಗೊಳ್ಳಿ ಇವರ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಗಂಗೊಳ್ಳಿಯ ಸ.ವಿ.ಹಿರಿಯ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ಶನಿವಾರ ಜರಗಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇವಸ್ಥಾನದ ಶ್ರೀ ಗಣೇಶೋತ್ಸವ ಸಮಿತಿ ಅಧ್ಯಕ್ಷ ಸಂದೇಶ ಜಿ.ಟಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭ ಮಲ್ಯರಬೆಟ್ಟು ಅಂಗನವಾಡಿ ಕಾರ್ಯಕರ್ತೆ ರೇಖಾ ಖಾರ್ವಿ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ನಾರಾಯಣ ಶೆಟ್ಟಿ, ಸಹ ಶಿಕ್ಷಕರಾದ ದೇವು, ರೇಖಾ ಖಾರ್ವಿ, ದೇವಸ್ಥಾನದ ಅಧ್ಯಕ್ಷ ಅರುಣ್ ಕುಮಾರ್, ಮಹೇಶ , ಶಿವ ಜಿ.ಟಿ., ಶ್ರೀಕಾಂತ ಎನ್., ಸುಶೀಲಾ, ನಾಗಿಣಿ, ಸುಂದರ ಬಿ., ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಲಯಾಧ್ಯಕ್ಷೆ ಸುಮಿತ್ರಾ ಜಿ., ಗುರುರಾಜ್ ಬಿ. ಮತ್ತಿತರರು ಉಪಸ್ಥಿತರಿದ್ದರು.
ಈಶ್ವರ ಜಿ. ಸ್ವಾಗತಿಸಿ ವಂದಿಸಿದರು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!