ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಬಾರಕೂರು ಕಚ್ಚೂರು ಶ್ರೀ ನಾಗೇಶ್ವರ ದೇವಸ್ಥಾನ ಸೇವಾ ಟ್ರಸ್ಟ್ ಭಂಡಾರಿ ಮಹಾ ಮಂಡಲ ಇವರ ವತಿಯಿಂದ ಭಂಡಾರಿ ಸಮಾಜದ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ಸಮಾರಂಭ ಶನಿವಾರ ದೇವಸ್ಥಾನದ ಭಂಡಾರಿ ಸಭಾಂಗಣದಲ್ಲಿ ಜರುಗಿತು.
ಈ ಸಂದರ್ಭ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಸೋಮಶೇಖರ ಬಂಡಾರಿ ಮಾತನಾ,ಡಿ ಕೋವಿಡ್ ಹಿನ್ನೆಲೆಯಲ್ಲಿ ಕಳೆದ 2 ವರ್ಷದಿಂದ ದೇವಸ್ಥಾನದ ಉತ್ಸವಗಳು ಮತ್ತು ಕಾರ್ಯಕ್ರಮಗಳು ವಿಜೃಂಭಣೆಯಿಂದ ನಡೆಯದ್ದಿದ್ದರೂ ಪೂಜಾ ಕಾರ್ಯಗಳು ಸಾಂಗವಾಗಿ ನಡೆದಿದೆ ಎಂದರು.

ಉಡುಪಿ ಮಂಗಳೂರು ಶಿವಮೊಗ್ಗ ಚಿಕ್ಕಮಗಳೂರು ಸೇರಿದಂತೆ ನಾನಾ ಭಾಗದಿಂದ ಬಂದ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿಯಲ್ಲಿ 90 ಶೇಕಡಾ ಪಡೆದ 32 ವಿದ್ಯಾರ್ಥಿಗಳನ್ನು ಮತ್ತು 90ಕ್ಕಿಂತ ಕಡಿಮೆ ಅಂಕ ಪಡೆದ 30 ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.

ದೇವಸ್ಥಾನದ ಸೇವಾ ಟ್ರಸ್ಟ್ ಅಧ್ಯಕ್ಷ ಕಡಂದಲೆ ಸುರೇಶ್ ಭಂಡಾರಿ, ಮಹಾಮಂಡಲದ ಅಧ್ಯಕ್ಷ ಸದಾಶಿವ ಭಂಡಾರಿ, ಕಾರ್ಯದರ್ಶಿ ಸತೀಶ್ ಭಂಡಾರಿ ಪಧಾಧಿಕಾರಿಗಳಾದ ಚಂದ್ರ ಶೇಖರ ಭಂಡಾರಿ, ಅಮೀತಾ ಗೀರೀಶ್, ಯುಕ್ತಾ ,ವಾರಿಜಾ ವಾಸುದೇವ ಭಂಡಾರಿ ನಿತ್ಯಾನಂದ ಭಂಡಾರಿ, ಸಂಜೀವ ಬಂಡಾರಿ, ಚಂದ್ರಶೇಖರ ಬಂಡಾರಿ ಬೈಕಾಡಿ, ಇನ್ನಿತರರು ಉಪಸ್ಥಿತರಿದ್ದರು.
ಬೆಳಿಗ್ಗೆ ಸಾಮೂಹಿಕ ಶ್ರೀಸತ್ಯನಾರಾಯಣ ಪೂಜೆ ಜರುಗಿತು.
