ಬೆಂಗಳೂರು: ಆಕ್ಟೋಬರ್ 25 ರಿಂದ 1ರಿಂದ 5ರ ತನಕ ಶಾಲೆ ಶುರು ಮಾಡುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಶಾಲೆ ಆರಂಭಕ್ಕೆ ಕೋವಿಡ್ ತಾಂತ್ರಿಕ ಸಮಿತಿ ಒಪ್ಪಿಗೆ ನೀಡಿದೆ. ಕರ್ನಾಟಕದಲ್ಲಿ ಈಗಾಗಲೇ 6 ನೇ ತರಗತಿಯಿಂದ ಉನ್ನತ ಶಿಕ್ಷಣ ಹಂತದವರೆಗಿನ ಎಲ್ಲ ತರಗತಿಗಳ ಭೌತಿಕ ಕ್ಲಾಸ್ ನಡೆಯುತ್ತಿದೆ.
ಕೊರೋನಾ ಮೂರನೇ ಅಲೆಯ ಭಯದ ಹಿನ್ನೆಲೆಯಿಂದ 1 ರಿಂದ 5 ನೇ ತರಗತಿ ಆರಂಭವಾಗಿರಲಿಲ್ಲ, ಇದಲ್ಲದೇ ಮಕ್ಕಳಿಗೆ ಕರೋನ ಸೊಂಕಿಗೆ ಲಸಿಕೆ ಬಂದಿರುವ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಮತ್ತೆ ಶಾಲೆಗಳನ್ನು ಪುನರಾರಂಭ ಮಾಡಲು ಮುಂದಾಗಿದೆ.
ಇನ್ನೂ ಶಾಲೆಗೆ ಮಕ್ಕಳಿಗೆ ಬರಲು ಯಾವುದೇ ಪ್ರಯತ್ನ ಮಾಡುವಂತಿಲ್ಲ, ಜೊತೆಗೆ ಮಕ್ಕಳು ಶಾಲೆಗೆ ಬರಲು ಹಾಜರಾತಿ ಕಡ್ಡಾಯವಲ್ಲ ಅಂತ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ. ಇದೇ ವೇಳೆ ಒಂದು ವಾರದ ಮಟ್ಟಿಗೆ ಶಾಲೆಯ ಅವಧಿಯನ್ನು ಕಡಿತ ಮಾಡಲಾಗುವುದು ಬಳಿಕ ಎಂದಿನಂತೆ ಸಮಯವನ್ನು ಮುಂದುವರೆಯಲಿದೆ ಅಂತ ಹೇಳಿದ್ದಾರೆ. ಇದಲ್ಲದೇ ಮಕ್ಕಳ ಪೋಷಕರ ಈಗಾಗಲೇ ಶಾಲೆ ಆರಂಭವಾಗಿರುವುದಕ್ಕೆ ಉತ್ತಮವಾಗಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ಕರೋನ ಸಾಂಕ್ರಮಿಕ ರೋಗದ ವಿರುದ್ದ ಸರ್ಕಾರ ಯಶಸ್ವಿಯಾಗಿ ಹೋರಾಡುತ್ತಿದೆ ಎಂದರು.

ಮಾರ್ಗಸೂಚಿ ಕೆಳಗಿನಂತಿವೆ :
- ಕೋವಿಡ್ ಮಾರ್ಗಸೂಚಿ ಪಾಲಿಸಿ ಶಾಲೆ ಆರಂಭಕ್ಕೆ ಸೂಚನೆ
- ಶಾಲೆಗೆ ಮಕ್ಕಳನ್ನು ಕಳುಹಿಸಲು ಹೆತ್ತವರ ಅನುಮತಿ ಅವಶ್ಯಕ
- ಕ್ಲಾಸ್ ರೂಮ್ನಲ್ಲಿ ಶೇ. 50 ಮಂದಿ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ
- ಶಾಲೆಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಕಡ್ಡಾಯ
- ಸಾಮಾಜಿಕ ಅಂತರವನ್ನು ಕಾಪಾಡುವಂತೆ ಸೂಚನೆ
- ಶಿಕ್ಷಕರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.