ಮಂಗಳೂರು : ಮಂಗಳೂರಿನ ಅಕ್ಷರಸಂತ ಎಂದೇ ಖ್ಯಾತಿಯಾಗಿರುವ ಹರೇಕಳ ಹಾಜಬ್ಬರಿಗೆ ನವೆಂಬರ್ 8ರಂದು ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.
ಹರೇಕಳ ಹಾಜಬ್ಬಾವರು ರಾಷ್ಟ್ರಪತಿ ರಾಮನಾಥ್ ಕೋವಿಂದ್ರಿಂದ ಪದ್ಮಶ್ರೀ ಪ್ರಶಸ್ತಿ ಸ್ವೀಕಾರ ಮಾಡಲಿದ್ದು, ಈ ಬಗ್ಗೆ ನವದೆಹಲಿಗೆ ಬರಬೇಕೆಂದು ಕೇಂದ್ರ ಸರ್ಕಾರದಿಂದ ಹಾಜಬ್ಬರಿಗೆ ಅಧಿಕೃತ ಆಹ್ವಾನ ಬಂದಿದೆ ಎಂದು ತಿಳಿದು ಬಂದಿದೆ.
2020ರ ಗಣರಾಜ್ಯೋತ್ಸವ ಸಂದರ್ಭದಲ್ಲಿ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಣೆಯಾಗಿತ್ತು. ಮಾರ್ಚ್ ತಿಂಗಳಿನಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಬೇಕಾಗಿತ್ತು, ಆದರೆ ಕೊರೊನಾ ಲಾಕ್ಡೌನ್ ಕಾರಣದಿಂದ ಕಾರ್ಯಕ್ರಮ ಮುಂದೂಡಲ್ಪಟ್ಟಿತ್ತು.
Advertisement. Scroll to continue reading.