Connect with us

Hi, what are you looking for?

Diksoochi News

ಕರಾವಳಿ

ಉಡುಪಿ ಲಯನ್ಸ್ ಕ್ಲಬ್ ವತಿಯಿಂದ ವಿದ್ಯಾಪೋಷಕ್ ವಿದ್ಯಾರ್ಥಿಗಳ ಮನೆಗೆ ಗ್ಯಾಸ್ ಸಂಪರ್ಕ

0

ಉಡುಪಿ : ಯಕ್ಷಗಾನ ಕಲಾರಂಗದ ವಿದ್ಯಾಪೋಷಕ ಫಲಾನುಭವಿ ವಿದ್ಯಾರ್ಥಿಗಳಾದ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶಕುಂತಲಾ ಹಾಗೂ ಪ್ರಥಮ ಪಿ.ಯು ವಿದ್ಯಾರ್ಥಿನಿ ಮಂಜುಳಾ ಇವರ ಮನೆಗೆ ಉಡುಪಿ ಲಯನ್ಸ್ ಕ್ಲಬ್ ಕೊಡಮಾಡಿದ ತಲಾ ಎರಡು ಸಿಲಿಂಡರ್ ಒಳಗೊಂಡ ಎಲ್.ಪಿ.ಜಿ ಗ್ಯಾಸ್ ಸಂಪರ್ಕವನ್ನು ಕಲ್ಪಿಸಲಾಯಿತು. ಇದರೊಂದಿಗೆ ಈರ್ವರು ವಿದ್ಯಾರ್ಥಿಗಳ ಮನೆಗೆ ತಲಾ ಎರಡು ಕುರ್ಚಿಗಳನ್ನು ನೀಡಲಾಯಿತು.

ಉಡುಪಿ ಲಯನ್ಸ್ ಕ್ಲಬ್‍ನ ಅಧ್ಯಕ್ಷರಾದ ಡಯಾನ ಎಂ. ವಿಠಲ ಪೈ ಹಸ್ತಾಂತರಿಸಿ ಕಲಾರಂಗದ ಇಂತಹ ಸಮಾಜಮುಖಿ ಕಾರ್ಯಕ್ರಮಗಳಿಗೆ ಲಯನ್ಸ್ ಕ್ಲಬ್ ಸದಾ ಸ್ಪಂದಿಸುತ್ತದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಮಾಜಿ ಲಯನ್ಸ್ ಜಿಲ್ಲಾ ಗವರ್ನರ್ ಡಾ. ತಲ್ಲೂರು ಶಿವರಾಮ ಶೆಟ್ಟಿ, ಕಾರ್ಯದರ್ಶಿ ವಿಷ್ಣುದಾಸ ಪಾಟೀಲ್, ಜಿಲ್ಲಾ ಸಂಯೋಜಕ ರವಿರಾಜ ಯು.ಎಸ್., ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಉಪಾಧ್ಯಕ್ಷ ಎಸ್.ವಿ. ಭಟ್, ಜತೆಕಾರ್ಯದರ್ಶಿ ಪ್ರೊ. ನಾರಾಯಣ ಎಂ. ಹೆಗಡೆ, ಅಶೋಕ್ ಎಂ. ಉಪಸ್ಥಿತರಿದ್ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಕಾರ್ಯಕ್ರಮ ಸಂಯೋಜಿಸಿ, ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

You May Also Like

ಕರಾವಳಿ

2 ಶಿರ್ವ : ಶಿರ್ವ ಸಂತ ಮೇರಿ ಪದವಿ ಪೂರ್ವ ಕಾಲೇಜಿನ ಮಹಿಳಾ ಸಂಘ ‘ಧಾರಿಣಿ’ಯ ಉದ್ಘಾಟನೆ ಇತ್ತೀಚೆಗೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸರಿತಾ ಆಲ್ವ,  ಯಶಸ್ಸು ಎನ್ನುವುದು ರಾತ್ರೋ ರಾತ್ರಿ...

error: Content is protected !!