Connect with us

Hi, what are you looking for?

Diksoochi News

ಸಿನಿಮಾ

ಪುನೀತ್ ರಾಜ್ ಕುಮಾರ್ ಗೆ ಹಾಲು – ತುಪ್ಪ ಕಾರ್ಯ ; ನೆಚ್ಚಿನ ಭಕ್ಷ ಭೋಜನ ನೈವೇದ್ಯ

0

ಚಂದನವನ : ಇಂದು ಪುನೀತ್ ಅವರು ನಿಧನರಾಗಿ ಐದನೇ ದಿನ. ಈ ಹಿನ್ನಲೆಯಲ್ಲಿ ಅವರ ಸಮಾಧಿ ಸ್ಥಳಕ್ಕೆ, ರಾಜ್ ಕುಟುಂಬಸ್ಥರೆಲ್ಲಾ ತೆರಳಿ, 5ನೇ ದಿನದ ಹಾಲು-ತುಪ್ಪ ಕಾರ್ಯವನ್ನು ನೆರವೇರಿಸಿದರು.

ಅಪ್ಪು ಸಮಾಧಿ ಮೇಲೆ ಮಣ್ಣಿನ ಹಣತೆ ಹಚ್ಚಿ, ಬಾಳೆ ಎಲೆಯಲ್ಲಿ ಅಪ್ಪುಗೆ ಇಷ್ಟವಾದ ಆಹಾರಗಳನ್ನು ಇಡಲಾಗಿತ್ತು. ಮುದ್ದೆ, ನಾಟಿ ಕೋಳಿ ಸಾರು, ಬಿರಿಯಾನಿ, ಕಬಾಬು, ಇಡ್ಲಿ, ಕಡ್ಲೆಕಾಳು, ಗೊಜ್ಜು, ಮೊಟ್ಟೆ ಬಿರಿಯಾನಿ, ಬಜ್ಜಿ ಇನ್ನಿತರೆ ತಿನಿಸುಗಳು ಹಾಗೂ ಕೆಲವು ಮಾದರಿಯ ಸಿಹಿ ತಿನಿಸುಗಳನ್ನು ಕುಟುಂಬಸ್ಥರು ತಯಾರಿಸಿ ತಂದಿದ್ದು, ಬಾಳೆ ಎಲೆಯಲ್ಲಿ ನೈವೇದ್ಯ ಇಟ್ಟರು.

ಪುನೀತ್ ಪತ್ನಿ ಅಶ್ವಿನಿ, ಮಕ್ಕಳು, ಶಿವಣ್ಣ, ರಾಘವೇಂದ್ರ ರಾಜ್‌ಕುಮಾರ್, ಅವರ ಮಕ್ಕಳು, ಪಾರ್ವತಮ್ಮ ರಾಜ್‌ಕುಮಾರ್ ತಮ್ಮ ಚಿನ್ನೇಗೌಡ ಅವರ ಮಕ್ಕಳಾದ ಶ್ರೀಮುರಳಿ, ವಿಜಯ ರಾಘವೇಂದ್ರ, ಗಣ್ಯರಾದ ಸಚಿವ ಗೋಪಾಲಯ್ಯ, ಚಿತ್ರರಂಗದ ಮುಖಂಡ ಸಾ.ರಾ.ಗೋವಿಂದು ಮೊದಲಾದವರು ಭಾಗವಹಿಸಿದ್ದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!