Connect with us

Hi, what are you looking for?

Diksoochi News

ಕರಾವಳಿ

ಕುಂದಾಪುರ : ಮತ್ತೆ ಹುಟ್ಟಿ ಬಾ ಅಪ್ಪು; ಅಗಲಿದ ಪುನೀತ್ ರಾಜ್ ಕುಮಾರ್ ಗೆ ರಾಜ್ ಸಂಘಟನೆ ವತಿಯಿಂದ ದೀಪ ನಮನ

0

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಕನ್ನಡಾಭಿಮಾನ ಡಾ. ರಾಜ್ ಸಂಘಟನೆ ವತಿಯಿಂದ ದೀಪಗಳನ್ನು ಬೆಳಗಿಸಿ ಭಾವ ಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಹೊಸ ಬಸ್ ನಿಲ್ದಾಣದಲ್ಲಿ ಜರುಗಿದ ಈ ಕಾರ್ಯಕ್ರಮದಲ್ಲಿ ಸಂಘಟನೆ ಅಧ್ಯಕ್ಷರಾದ ರತ್ನಾಕರ ಪೂಜಾರಿ ಅವರು ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಅಪ್ಪು ಅವರ ಹಠಾತ್ ನಿರ್ಗಮನ ನಮಗೆ ಒಡ ಹುಟ್ಟಿದ ಸಹೋದರನನ್ನೇ ಕಳೆದು ಕೊಂಡನಂತಹ ಶೂನ್ಯ ಭಾವ ಆವರಿಸಿದಂತಾಗಿದೆ. ಇಂತಹ ಹೃದಯವಂತ ಮಾನವೀಯ ಮಹಾ ಚೇತನಾ ಮರೆಯಾಗಿದ್ದು, ಆ ನೋವನ್ನು ವ್ಯಕ್ತಪಡಿಸಲು ಯಾವ ಪದಗಳಿಗೂ ಅಸಾಧ್ಯ ಎಂದು ಪುನೀತ್ ಅಭಿಮಾನಿಗಳು ಕಂಬನಿ ಮಿಡಿದರು.

ಈ ಕಾರ್ಯಕ್ರಮದಲ್ಲಿ ಮಾಜಿ ರಾಜ್ಯ ಕಬ್ಬಡಿ ಆಟಗಾರ ತನ್ವಿರ್ ಕುಂದಾಪುರ, ಸುನಿಲ್ ಖಾರ್ವಿ ತಲ್ಲೂರು, ಶ್ರೀಧರ್ ಗಾಣಿಗ, ಪ್ರಭಾಕರ್ ಖಾರ್ವಿ, ಅಗಸ್ಟಿನ್ ಡಿಸೋಜ, ಮಝರ್ ಕುಂದಾಪುರ, ಸಂತೋಷ್ ಕುಂದೇಶ್ವರ, ಗಾಳಿ ಮಾಧವ ಖಾರ್ವಿ, ಡುಂಡಿರಾಜ್, ಕಿಶನ್ ಖಾರ್ವಿ, ನವೀನ್ ಕುಮಾರ್, ನಾರಾಯಣ ಗಾಣಿಗ, ನಾಗರಾಜ್ ಖಾರ್ವಿ, ಸೂರ್ಯ ದೇವಾಡಿಗ, ಶಿವರಾಜ್ ಖಾರ್ವಿ, ಗುರು ಖಾರ್ವಿ, ಪ್ರಸಾದ್ ಗಾಣಿಗ, ಕೊಡಿ ಹಾಗೂ ಮುಂತಾದವರು ಭಾಗವಹಿಸಿ ನುಡಿನಮನಗಳನ್ನು ಅರ್ಪಿಸಿದರು. ಕಾರ್ಯಕ್ರಮವನ್ನು ಗಮನಿಸಿ ಬಸ್ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರು ಸಹ ದೀಪವನ್ನು ಹಿಡಿದು ಶ್ರದ್ಧಾಂಜಲಿ ಅರ್ಪಿಸಿದ್ದು ವಿಶೇಷವಾಗಿತ್ತು.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!