ವರದಿ : ದಿನೇಶ್ ರಾಯಪ್ಪನಮಠ
ಬೈಂದೂರು: ತಾಲೂಕಿನ ಉಪ್ಪುಂದ ಗ್ರಾಮದ ಫಿಶರೀಸ್ ಕಾಲೋನಿಯಲ್ಲಿ ಕಾನೂನು ಬಾಹಿರವಾಗಿ ದಾಸ್ತಾನು ಇರಿಸಿದ್ದ ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದ ಅಕ್ಕಿಯನ್ನು ಹಾಗೂ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಬೈಂದೂರಿನ ಜುಬೇರ್ (೩೫), ಮುಂತಾಸೀಬ್ (42 ) ಬಂಧಿತ ಆರೋಪಿಗಳು.
Advertisement. Scroll to continue reading.


ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ದಾಸ್ತಾನು ಇರಿಸಿದ್ದಾರೆ ಎಂಬ ಖಚಿತ ಮಾಹಿತಿ ಆಧರಿಸಿ ಫಿಶರೀಸ್ ಕಾಲೋನಿಗೆ ತೆರಳಿದಾಗ ಇಕೋ ಕಾರು ನಂಬರ್ ಕೆಎ-20 ಎಮ್ ಡಿ-7035 ನೇದರಲ್ಲಿ ಅಕ್ಕಿ ಚೀಲವನ್ನು ಲೋಡ್ ಮಾಡಿ ಇಟ್ಟಿರುವುದು ಕಂಡು ಬಂದಿದೆ.
ತಕ್ಷಣ ಬೈಂದೂರು ಪೋಲಿಸರಿಗೆ ಮಾಹಿತಿ ನೀಡಿದ್ದು, ಪೋಲಿಸ್ ಸಿಬ್ಬಂದಿಯೊಂದಿಗೆ ಕಾರಿನಲ್ಲಿ ೩೧ ಚೀಲಗಳಲ್ಲಿ ಇದ್ದ ಒಟ್ಟು ೧೦೦೦ ಕೆಜಿ ಅಕ್ಕಿ ಮತ್ತು ತೂಕದ ಯಂತ್ರವನ್ನು ವಶಕ್ಕೆ ಪಡೆಯಲಾಗಿದೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.