ತಮಿಳುನಾಡು : ಭಾರೀ ಮಳೆಗೆ ರಾಜ್ಯ ತತ್ತರಿಸಿದ್ದು, ಈವರೆಗೆ ಮಹಾಮಳೆಗೆ ಐವರು ಬಲಿಯಾಗಿದ್ದಾರೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮನೆಗಳಿಗೆ ಹಾನಿಯಾಗಿದೆ.
ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ 10 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಹಾಗೂ 9 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಚೆನ್ನೈ, ತಿರುನಲ್ವೇಲಿ, ತೆಂಕಾಸಿ, ರಾಮನಾಥಪುರಂ, ನಾಗಪಟ್ಟಣಂ, ತಿರುವಳ್ಳೂರು, ಕಾಂಚೀಪುರಂ, ಚೆಂಗಲ್ಪಟ್ಟು, ವಿಲ್ಲಿಪುರಂ, ಮೈಲಾಡುದುರೈ, ವಿರುದುನಗರ, ಕಡಲೂರು, ಶಿವಗಾಣಗಿ, ಮಧುರೈ ಸೇರಿದಂತೆ 14 ಜಿಲ್ಲೆಗಳಲ್ಲಿ ಶಾಲಾ, ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.