Connect with us

Hi, what are you looking for?

Diksoochi News

ರಾಜ್ಯ

ನ.11 ರಂದು ರಾಜ್ಯಾದ್ಯಂತ ವೀರ ವನಿತೆ ಓಬವ್ವ ಜಯಂತಿ ಆಚರಿಸಲು ಆದೇಶ

0

ಬೆಂಗಳೂರು : ನಾಡಿನ ವೀರ ಮಹಿಳೆ ಚಿತ್ರದುರ್ಗದ ಓಬವ್ವ ಅವರ ಜನ್ಮದಿನದ ಗೌರವಾರ್ಥವಾಗಿ ರಾಜ್ಯದಾದ್ಯಂತ ನವೆಂಬರ್‌ 11 ರಂದು ಒನಕೆ ಓಬವ್ವ ಜಯಂತಿಯನ್ನು ರಾಜ್ಯ ಸರ್ಕಾರದ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ವತಿಯಿಂದ ಆಚರಿಸಲು ಆದೇಶಿಸಲಾಗಿದೆ.

ಈ ಕುರಿತಂತೆ ಕನ್ನಡ ಮತ್ತ ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಕೆ.ವೆಂಕಟೇಶಪ್ಪ ನಡವಳಿಗಳನ್ನು ಹೊರಡಿಸಿದ್ದು, ಒನಕೆ ಓಬವ್ವ ಹೆಸರು, ಚಿತ್ರದುರ್ಗ ಇತಿಹಾಸದಲ್ಲಿ ಮರೆಯಲಾಗದ್ದು.

ಅವರನ್ನು ಕರ್ನಾಟಕ ವೀರ ವನಿತೆಯರಾದ ಕಿತ್ತೂರು ಚೆನ್ನಮ್ಮ, ರಾಣಿ ಅಬ್ಬಕ್ಕರ ಸಾಲಿನಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಒನಕೆ ಓಬವ್ವ 18ನೇ ಶತಮಾನದ ಚಿತ್ರದುರ್ಗದ ಕೋಟೆಯ ಪಾಳೆಗಾರನಾಗಿದ್ದ ಮದಕರಿ ನಾಯಕನ ಕೋಟೆಯ ಕಾವಲುಗಾರ ಕಹಳೆ ಮುದ್ದಹನುಮಪ್ಪನ ಹೆಂಡತಿ

Advertisement. Scroll to continue reading.

ಚಿತ್ರದುರ್ಗದ ಮೇಲೆ ಹದರಾಲಿ ಸೈನಿಕರು ಹಟತ್ತಾಗಿ ಆಕ್ರಮಣ ಮಾಡಿದಾಗ ಓಬವ್ವ ತನ್ನ ಒನಕೆಯನ್ನು ಅಸ್ತ್ರವನ್ನಾಗಿ ಇಟ್ಟುಕೊಂಡು ಶತ್ರುಗಳನ್ನು ಎದುರಿಸಿದ್ದಳು. ಚಿತ್ರದುರ್ಗದ ಕೋಟೆಯ ಕಿಂಡಿಯಿಂದ ಬಂದ ನೂರಾರು ಶತ್ರು ಸೈನಿಕರನ್ನು ತನ್ನ ಒನಕೆಯಿಂದಲೇ ಕೊಂದಳು. ಕೊನೆಯಲ್ಲಿ ಎದುರಾಳಿಯು ಬೆನ್ನಹಿಂದೆ ಬಂದದ್ದನ್ನು ಗಮನಿಸಲಾಗದೇ ಶುತ್ರುವಿನ ಕತ್ತಿಗೆ ಬಲಿಯಾದಳು. ಅಂದಿನಂದ ಅವರು ಒನಕೆ ಓಬವ್ವ ಎಂದು ಪ್ರಸಿದ್ಧಿ ಹೊಂದಿರುತ್ತಾರೆ. ಹಾಗೂ ಕಿಂಡಿಯನ್ನು ಓಬವ್ವನ ಕಿಂಡಿ ಅಥವಾ ಒನಕೆ ಕಿಂಡಿ ಎಂದು ಕರೆಯಲಾಗುತ್ತದೆ. ಚಿತ್ರದುರ್ಗದ ಆಟದ ಮೈದಾನಕ್ಕೆ ಒನಕೆ ಓಬವ್ವನ ಕ್ರೀಡಾಂಗಣ ಎಂದು ಅವರ ಹೆಸರಿಟ್ಟು ಗೌರವಿಸಲಾಗಿದೆ. ಈ ಮೇಲ್ಕಂಡಗಳ ಅಂಶಗಳ ಹಿನ್ನಲೆಯಲ್ಲಿ ಒನಕೆ ಓಬವ್ವರ ಜನ್ಮ ದಿನವಾದ ನವೆಂಬರ್ 11ರಂದು ಒನಕೆ ಓಬವ್ವ ಜಯಂತಿಯನ್ನಾಗಿ ಆಚರಣೆ ಮಾಡುವಂತೆ ಘೋಷಿಸಲಾಗಿದೆ. ಅದರಂತೆ ನವೆಂಬರ್ 11ರಂದು ಒನಕೆ ಓಬವ್ವ ಜಯಂತಿಯನ್ನು ರಾಜ್ಯಾದ್ಯಂತ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸಲು ಸರ್ಕಾರ ಆದೇಶಿಸಿದೆ ಎಂದು ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!