ವರದಿ: ದಿನೇಶ್ ರಾಯಪ್ಪನಮಠ
ಉಡುಪಿ : ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗದ ಮತ್ತು ಸಮಾಜ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ವಿಧಾನಪರಿಷತ್ ಚುನಾವಣೆಯ ಅಭ್ಯರ್ಥಿಯಾಗಿ ಬಿಜೆಪಿಯಿಂದ ಇಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಾಮಪತ್ರ ಸಲ್ಲಿಸುವ ಮುನ್ನ ಭಾರತೀಯ ಜನತಾ ಪಾರ್ಟಿಯ ಹಿರಿಯ ನಾಯಕ, ಉಡುಪಿ ಪುರಸಭಾ ಮಾಜಿ ಅಧ್ಯಕ್ಷ ಮಲ್ಪೆ ಸೋಮಶೇಖರ್ ಭಟ್ ಅವರ ಮನೆಗೆ ಭೇಟಿ ನೀಡಿ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಭಟ್ ರು, ಅತ್ಯಂತ ಹೆಚ್ಚು ಅಂತರದಿಂದ ಗೆದ್ದು ಬಂದು ಮತ್ತಷ್ಟು ರಾಜ್ಯದ ಜನಸೇವೆ ಮಾಡಲು ಅವಕಾಶ ಸಿಗಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ನಗರಸಭಾ ಸದಸ್ಯೆ ರಶ್ಮಿ ಚಿತ್ತರಂಜನ್ ಭಟ್, ಕೋಟೇಶ್ವರ ಪಂಚಾಯಿತ್ ಅಧ್ಯಕ್ಷ ಕೃಷ್ಣ ಗೊಲ್ಲ ಇನ್ನಿತರರು ಉಪಸ್ಥಿತರಿದ್ದರು.
Advertisement. Scroll to continue reading.

In this article:Diksoochi news, diksoochi Tv, diksoochi udupi, kota shrinivas poojari

Click to comment