ವರದಿ : ದಿನೇಶ್ ರಾಯಪ್ಪನಮಠ
ಗಂಗೊಳ್ಳಿ : ಪೇಟೆ ಶ್ರೀ ವಿಠಲ ರಕುಮಾಯಿ ತಥಾ ಮುಖ್ಯಪ್ರಾಣ ದೇವಸ್ಥಾನದಲ್ಲಿ ಜರಗುವ ವಾರ್ಷಿಕ ದೀಪೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಬುಧವಾರ ವಿಜೃಂಭಣೆಯಿಂದ ಜರಗಿತು.
ದೀಪೋತ್ಸವದ ಅಂಗವಾಗಿ ವನಭೋಜನ, ಧಾತ್ರೆ ಹವನ, ಮಹಾಪೂಜೆ, ಮಹಾಸಮಾರಾಧನೆ ಮತ್ತಿತರ ಧಾರ್ಮಿಕ ಕಾರ್ಯಕ್ರಮಗಳು ದೇವಸ್ಥಾನದ ತಾಂತ್ರಿಕ ಜಿ.ರಾಘವೇಂದ್ರ ಆಚಾರ್ಯ ಮತ್ತು ದೇವಳದ ಪ್ರಧಾನ ಅರ್ಚಕ ಜಿ.ಪ್ರದೀಪ ಭಟ್ ನೇತೃತ್ವದಲ್ಲಿ ನಡೆಯಿತು. ದೇವಸ್ಥಾನದ ಆಡಳಿತ ಮೊಕ್ತೇಸರ ಜಿ.ರಘುವೀರ ನಾಯಕ್, ಜಿ.ನರಸಿಂಹ ನಾಯಕ್, ಪುರೋಹಿತರು, ಅರ್ಚಕರು, ಊರಿನ ಹತ್ತು ಸಮಸ್ತರು. ಆಡಳಿತ ಮಂಡಳಿ ಸದಸ್ಯರು, ಸಮಾಜಬಾಂಧವರು ಉಪಸ್ಥಿತರಿದ್ದರು.
Advertisement. Scroll to continue reading.