Connect with us

Hi, what are you looking for?

Diksoochi News

ಕರಾವಳಿ

ಪಡುಕೆರೆ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ; ಸಂವಿಧಾನದಿಂದಲೇ ಭಾರತದಲ್ಲಿ ಪ್ರಜಾತಂತ್ರ ಬದುಕು ಸಾಕಾರಗೊಂಡಿದೆ : ಡಾ. ಸುಧಾಕರ್

0

ವರದಿ : ದಿನೇಶ್ ರಾಯಪ್ಪನಮಠ

ಕೋಟ: ಲಕ್ಷ್ಮೀ ಸೋಮ ಬಂಗೇರ ಕಾಲೇಜಿನಲ್ಲಿ ರಾಜಕೀಯಶಾಸ್ತ್ರ ವಿಭಾಗದಿಂದ ಸಂವಿಧಾನ ದಿನಾಚರಣೆ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಡಾ. ಸುಧಾಕರ್ ದೇವಾಡಿಗ ಭಾರತದಲ್ಲಿ ಸಂವಿಧಾನದಿಂದ ಪ್ರಜಾಪ್ರಭುತ್ವ ಸಾಕಾರಗೊಂಡಿದೆ. ಪ್ರಜಾತಂತ್ರ ಮೌಲ್ಯಗಳಾದ ಸಮಾನತೆ, ಸ್ವಾತಂತ್ರ್ಯ ಮತ್ತು ಹಕ್ಕುಗಳೇನಾದರೂ ಸಾಮಾನ್ಯರಿಗೆ ದೊರಕಿದ್ದರೆ ಮತ್ತು ರಕ್ಷಿಸ್ಪಟ್ಟಿದ್ದರೆ ಅದು ಸಂವಿಧಾನದಿಂದ. ಬಹುರೂಪಿ ದೇಶವಾಗಿದ್ದರೂ ಐಕ್ಯತೆ ಮತ್ತು ಸಮಗ್ರತೆ ಕೂಡ ಸಂವಿಧಾನದಿಂದಾಗಿ ಸಾಧ್ಯವಾಗಿದೆ. ಸಂವಿಧಾನ ಕೇವಲ ಆಡಳಿತ ವೈಖರಿಯನ್ನು ನಿರ್ದೇಶಿಸುವ ಗ್ರಂಥವಾಗಿದೆ. ದೇಶವನ್ನು ನಿರ್ಮಾಣ ಮಾಡುವ, ರಕ್ಷಿಸುವ ಹಾಗೂ ಎಲ್ಲಾ ಕಳಂಕಗಳನ್ನು ಹೋಗಲಾಡಿಸುವ ಕನಸಿನ ಮಾದರಿ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವಕರ್ ವಿದ್ಯಾರ್ಥಿಗಳಿಗೆ ಸಂವಿಧಾನ ಪ್ರತಿಜ್ಞಾ ಬೋಧಿಸಿ ಸಂವಿಧಾನದ ಆಶಯಗಳನ್ನು ಯುವಜನತೆಗೆ ಅಥೈಸುವ ಅವಶ್ಯಕತೆಯಿದೆ ಎಂದರು. ರಾಜಕೀಯ ಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರಶಾಂತ್ ನೀಲಾವರ ಸಂವಿಧಾನ ದಿನಾಚರಣೆಯ ಔಚಿತ್ಯವನ್ನು ತಿಳಿಸಿದರು.

Advertisement. Scroll to continue reading.

ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ನಾಗರಾಜ ವೈದ್ಯ, ಸಮಾಜಕಾರ್ಯ ಸಹಾಯಕ ಪ್ರಾಧ್ಯಾಪಕ ಅನಂತ್‍ಕುಮಾರ್ ಸಿ.ಎಸ್, ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಇತಿಹಾಸ ವಿಭಾಗದ ಮುಖ್ಯಸ್ಥರಾದ ರಾಜಣ್ಣ ಎಂ, ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಮನೋಜ್ ಕುಮಾರ್, ಕಚೇರಿ ಸಹಾಯಕ ಸುಜೀಂದ್ರ ಭಾಗವಹಿಸಿದ್ದರು. ರಾಜ್ಯಶಾಸ್ತ್ರ ವಿದ್ಯಾರ್ಥಿಗಳಾದ ಸುಧೀರ್ ಸ್ವಾಗತಿಸಿದರೆ, ರಕ್ಷಿತಾ ವಂದಿಸಿದರು ಹಾಗೂ ಸಿಂಧೂರ ಕಾರ್ಯಕ್ರಮ ನಿರೂಪಿಸಿದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!