ವರದಿ :ದಿನೇಶ್ ರಾಯಪ್ಪನಮಠ
ಉಡುಪಿ: ಗೃಹ ರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ಕ್ರೀಡಾ ಕೂಟವು ಡಿ. 1 ರಿಂದ ಡಿ.3 ರವರೆಗೆ ನಗರದ ಚಂದು ಮೈದಾನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಕಮಾಡೆಂಟ್ ಡಾ| ಪ್ರಶಾಂತ್ ಶೆಟ್ಟಿ ತಿಳಿಸಿದರು
ಸೋಮವಾರ ಗೃಹರಕ್ಷಕ ದಳದ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು

ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ ವಿಜೇತರಾದ ದ.ಕ, ಉಡುಪಿ, ಉತ್ತರ ಕನ್ನಡ ಹಾಗು ಚಿಕ್ಕಮಗಳೂರು ಜಿಲ್ಲೆಯ 140 ಗೃಹ ರಕ್ಷಕ/ರಕ್ಷಕಿಯರು ಭಾಗವಹಿಸಲಿದ್ದಾರೆ.
ಡಿ.1 ರ ಸಂಜೆ 4.30 ಕ್ಕೆ ಜಿಲ್ಲಾಧಿಕಾರಿ ಕೂರ್ಮಾ ರಾವ್ ಕ್ರೀಡಾ ಕೂಟವನ್ನು ಉದ್ಘಾಟಿಸಲಿದ್ದಾರೆ. ಮಣಿಪಾಲ ಕೆ.ಎಂ.ಸಿಯ ಡೀನ್ ಡಾ| ಶರತ್ ಕೆ ರಾವ್, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಕುಮಾರ್ ಚಂದ್ರ, ಸಿವಿಲ್ ಇಂಜಿನಿಯರ್ ಅಸೋಸಿಯೇಷನ್ ನ ಅಧ್ಯಕ್ಷ ಗೋಪಾಲ ಭಟ್ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಡಿ. 3 ರ ಸಮಾರೋಪಕ್ಕೆ ಆರಕ್ಷಕ ಉಪ ಮಹಾ ನಿರೀಕ್ಷಕರು ಹಾಗು ಗೃಹರಕ್ಷಕದಳದ ಅಪರ ಮಹಾದೇಷ್ಠರು ಕೆ.ಟಿ. ಬಾಲಕೃಷ್ಣ, ಉಡುಪಿ ಪೋಲಿಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಜಿಲ್ಲಾ ಟೆನ್ನಿಸ್ ಬಾಲ್ ಅಸೋಸಿಯೇಷನ್ ನ ಅಧ್ಯಕ್ಷ ಗೌತಮ್ ಶೆಟ್ಟಿ, ಅಂತರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಅಕ್ಷತಾ ಪೂಜಾರಿ ಅತಿಥಿಗಳಾಗಿ ಆಗಮಿಸಲಿದ್ದಾರೆ ಎಂದು ತಿಳಿಸಿದರು
ಪತ್ರಿಕಾಗೋಷ್ಠಿಯಲ್ಲಿ ಉಡುಪಿ ಮತ್ತು ದ.ಕ ಜಿಲ್ಲೆಯ ಡೆಪ್ಯೂಟಿ ಕಮಾಡೆಂಟ್ ರಮೇಶ್, ಕಚೇರಿ ಅಧೀಕ್ಷರಾದ ಕವಿತಾ, ಪ್ರಥಮ ದರ್ಜೆ ಸಹಾಯಕಿ ಶ್ಯಾಮಲಾ ಉಪಸ್ಥಿತರಿದ್ದರು.

