ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ಅವರ ಇ ಆಡಳಿತ ಸಲಹೆಗಾರರನ್ನಾಗಿ ಬೇಳೂರು ಸುದರ್ಶನ್ ಅವರನ್ನು ನೇಮಕ ಮಾಡಲಾಗಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದೆ. ಬೇಳೂರು ಸುದರ್ಶನ್ ಅವರನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ದರ್ಜೆಯ ಸ್ಥಾನಮಾನದೊಂದಿಗೆ ಮುಖ್ಯಮಂತ್ರಿಯವರ ಇ-ಆಡಳಿತ ಸಲಹೆಗಾರರ ಹುದ್ದೆಗೆ ನೇಮಿಸಿರುವುದಾಗಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಶಿವಮೊಗ್ಗ ಜಿಲ್ಲೆ ಬೇಳೂರಿನ ಸುದರ್ಶನ ಅವರು ಮುದ್ರಣ, ಟಿವಿ ಮತ್ತು ಆನ್ ಲೈನ್ ಮೂರು ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದಾರೆ.
Advertisement. Scroll to continue reading.