ನವದೆಹಲಿ : ದೇಶದಲ್ಲಿ ಒಮಿಕ್ರಾನ್ ಭೀತಿ ಆರಂಭಗೊಂಡಿದೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ಒಮಿಕ್ರಾನ್ ಸೋಂಕಿನ ಪ್ರಕರಣ ವರದಿಯಾಗಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.
ಮೊದಲ ಕೊರೊನಾ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿನ ಪ್ರಕರಣ ಕರ್ನಾಟಕದಲ್ಲಿ ಪತ್ತೆಯಾಗಿತ್ತು. ಬೆಂಗಳೂರಿನ ಇಬ್ಬರಿಗೆ ಸೋಂಕು ತಗುಲಿತ್ತು.
ಶನಿವಾರದಂದು ಗುಜರಾತಿನ ಜಾಮ್ ನಗರ ಹಾಗೂ ಮಹಾರಾಷ್ಟ್ರದ ಮುಂಬೈನಲ್ಲಿ ತಲಾ ಒಂದೊಂದು ಒಮಿಕ್ರಾನ್ ಸೋಂಕಿನ ಪ್ರಕರಣಗಳು ಪತ್ತೆಯಾಗಿತ್ತು.
Advertisement. Scroll to continue reading.

ಇಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ಒಮಿಕ್ರಾನ್ ಸೋಂಕಿನ ಪ್ರಕರಣ ಪತ್ತೆಯಾಗಿದೆ. ಟಾಂಜಾನಿಯಾದಿಂದ ದೆಹಲಿಗೆ ಬಂದಿದ್ದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ತಗುಲಿದ್ದು, ಅವರನ್ನು ಎಲ್.ಎನ್.ಜೆ.ಪಿ. ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.