ಬೆಂಗಳೂರು : ನಿನ್ನೆ ನಿಧನರಾದ ಚಂದನವನದ ಹಿರಿಯ ನಟ ಶಿವರಾಂ ಅವರ ಅಂತ್ಯ ಸರ್ಕಾರ ಬನಶಂಕರಿಯ ಚಿತಾಗಾರದಲ್ಲಿ ನಡೆಯಿತು. ಸಕಲ ಸರ್ಕಾರಿ ಗೌರವಗಳೊಂದಿಗೆ ಅಪೂರ್ವ ಕಲಾವಿದನಿಗೆ ಅಂತಿಮ ವಿದಾಯ ಸಲ್ಲಿಸಲಾಯಿತು.
ಮನೆಯಲ್ಲಿ ಬಿದ್ದು ತಲೆಗೆ ತೀವ್ರವಾಗಿ ಪೆಟ್ಟುಗೊಂಡು ಕೋಮಾ ಸ್ಥಿತಿಗೆ ತಲುಪಿದ್ದಂತ ಸ್ಯಾಂಡಲ್ ವುಡ್ ಹಿರಿಯ ನಟ ಶಿವರಾಂ ಅವರು, ನಿನ್ನೆ ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದರು.
ರವೀಂದ್ರ ಕಲಾ ಕ್ಷೇತ್ರದಲ್ಲಿ ಸಾರ್ವಜನಿಕರ ದರ್ಶನಕ್ಕಾಗಿ ಪಾರ್ಥೀವ ಶರೀರವನ್ನು ಇರಿಸಲಾಗಿತ್ತು. ನಂತರ ಪಾರ್ಥೀವ ಶರೀರವನ್ನು ತ್ಯಾಗರಾಜನಗರ ಮನೆಗೆ ಈಗ ತರಲಾಗಿತ್ತು. ಬಳಿಕ ಗುರುಸ್ವಾಮಿ ಶಿವರಾಂ ಅವರಿಗೆ ಅಯ್ಯಪ್ಪ ಭಕ್ತವೃಂದದಿಂದ ಪೂಜೆ ಸಲ್ಲಿಸಲಾಯಿತು. ಅಷ್ಟಾಭಿಷೇಕ ನಡೆಯಿತು. ಬ್ರಾಹ್ಮಣ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಿತು.
Advertisement. Scroll to continue reading.
