ತಮಿಳುನಾಡು : ನೀಲಗಿರಿ ಬೆಟ್ಟದ ಕುನ್ನೂರ್ ಬಳಿ ಸೇನಾ ಹೆಲಿಕಾಪ್ಟರ್ ಪತನಗೊಂಡಿದೆ. ಹಿರಿಯ 6 ಅಧಿಕಾರಿಗಳು ಹೆಲಿಕಾಪ್ಟರ್ ನಲ್ಲಿದ್ದರು ಎಂದು ತಿಳಿದುಬಂದಿದೆ. ಮೂವರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಇದೇ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ಪೊಲೀಸರು, ಅಗ್ನಿಶಾಮಕ ದಳದಿಂದ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಸಿಗಬೇಕಿದೆ.
Advertisement. Scroll to continue reading.