ಬೆಂಗಳೂರು : ಸೇನಾ ಹೆಲಿಕಾಪ್ಟರ್ ಅಪಘಾತದಿಂದ ಬದುಕುಳಿದ ಏಕೈಕ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನ ಬೆಂಗಳೂರಿನ ಕಾಮಾಂಡೋ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಕೂನೂರ್ ಬಳಿ ಚಾಪರ್ ಅಪಘಾತದಲ್ಲಿ ಬದುಕುಳಿದ ಏಕೈಕ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲು ವೆಲ್ಲಿಂಗ್ಟನ್ʼನಿಂದ ಸುಲೂರಿಗೆ ಗುರುವಾರ ಸ್ಥಳಾಂತರಿಸಲಾಗಿದೆ. ಅವರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಬುಧವಾಎ ಮಿ-17ವಿ5 ಹೆಲಿಕಾಪ್ಟರ್ ತಮಿಳುನಾಡಿನ ಕುನೂರ್ ನಲ್ಲಿ ಪತನಗೊಂಡಿತ್ತು. ಅಪಘಾತದಲ್ಲಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ಅವರ ಪತ್ನಿ ಮಧುಲಿಕಾ ಮತ್ತು 11 ಸಶಸ್ತ್ರ ಪಡೆಗಳ ಸಿಬ್ಬಂದಿಗಳು ಮೃತಪಟ್ಟಿದ್ದಾರೆ.
Advertisement. Scroll to continue reading.