Connect with us

Hi, what are you looking for?

Diksoochi News

ಸಾಹಿತ್ಯ

ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ, ಲೇಖಕಿ ರಾಜೇಶ್ವರಿ ನಿಧನ

1

ಬೆಂಗಳೂರು: ಸಾಹಿತಿ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರ ಪತ್ನಿ, ಲೇಖಕಿ ರಾಜೇಶ್ವರಿ ತೇಜಸ್ವಿ (84) ಅವರು ಮಂಗಳವಾರ ಬೆಳಿಗ್ಗೆ ನಿಧನರಾದರು.

ಅವರು ಎಚ್‌ಎಸ್‌ಆರ್ ಲೇಔಟ್‌ನಲ್ಲಿರುವ ತಮ್ಮ ಪುತ್ರಿಯ ನಿವಾಸದಲ್ಲಿ ವಾಸವಿದ್ದರು.

ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.

Advertisement. Scroll to continue reading.

ಎಚ್ಎಸ್ಆರ್ ಲೇಔಟ್‌ನ ಪುತ್ರಿಯ ಮನೆಯಲ್ಲಿ ಪಾರ್ಥಿವ ಶರೀರದ ದರ್ಶನಕ್ಕೆ ಅವಕಾಶ ಮಾಡಲಾಗಿದೆ. ಅನಂತರ ಆಸ್ಪತ್ರೆಗೆ ದೇಹದಾನ ಮಾಡಲು ನಿರ್ಧರಿಸಲಾಗಿದೆ.

‘ನನ್ನ ತೇಜಸ್ವಿ’ ಅವರ ಮೊಟ್ಟ ಮೊದಲ ಪುಸ್ತಕ. ‘ನಮ್ಮ ಮನೆಗೂ ಬಂದರು ಗಾಂಧೀಜಿ’  ಸೇರಿದಂತೆ ಕೆಲ ಕೃತಿಗಳನ್ನು ಅವರು ರಚಿಸಿದ್ದಾರೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!