ಬೆಂಗಳೂರು : ಯಲಹಂಕ ಬಿಇಒ ಟಿ.ಎನ್ ಕಮಲಾಕರ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕೊಡಿಗೇಹಳ್ಳಿಯ ತಮ್ಮ ಮನೆಯಲ್ಲಿ ಡೆತ್ನೋಟ್ ಬರೆದಿಟ್ಟು, ಅವ್ರು ತಮ್ಮ ಡಬಲ್ ಬ್ಯಾರಲ್ ಗನ್ನಿಂದ ಗುಂಡು ಹಾರಿಸಿಕೊಂಡು ಕಮಲಾಕರ್ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅನಾರೋಗ್ಯದಿಂದ ಮನನೊಂದು ಸಾವಿಗೆ ಶರಣಾಗಿರುವುದಾಗಿ ಅವರು ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾರೆ ಎನ್ನಲಾಗಿದೆ.
Advertisement. Scroll to continue reading.

ಈವರೆಗೆ 25 ಸಾವಿರಕ್ಕೂ ಹೆಚ್ಚು ಮಾತ್ರೆಗಳನ್ನ ಸೇವಿಸಿದ್ದೇನೆ. ಅನಾರೋಗ್ಯದಿಂದ ಜೀವನ ಸಾಕೆನಿಸಿದೆ. ನನ್ನ ಕುಟುಂಬದವರು ಈವರೆಗೆ ನೋಡಿಕೊಂಡಿದ್ದು ನನ್ನ ಅದೃಷ್ಟ. ಇನ್ನು ನಮ್ಮ ಮನೆಯವರು ಎಲ್ಲರೂ ತುಂಬಾ ಒಳ್ಳೆಯವ್ರು. ಆದ್ರೆ, ಅವರಿಗೆ ಇನ್ನೂ ಹೆಚ್ಚು ನೋವು ಕೋಡೋಕೆ ಇಷ್ಟವಿಲ್ಲ. ತೊಂದರೆ ಕೊಡಬಾರದು ಎಂದು ಈ ನಿರ್ಧಾರಕ್ಕೆ ಬಂದಿದ್ದೇನೆ. ನನ್ನ ಸಾವಿಗೆ ನಾನೇ ಕಾರಣ ಎಂದು ಕಮಲಾಕರ್ ಡೆತ್ನೋಟ್ ಬರೆದಿದ್ದಾರೆ.
ಈ ಬಗ್ಗೆ ಕೊಡಿಗೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ
Advertisement. Scroll to continue reading.
