ಬ್ರಹ್ಮಾವರ : ಮಾಧ್ಯಮವನ್ನು ನಾಲ್ಕನೆ ಅಂಗವನ್ನಾಗಿ ಪರಿಗಣಿಸಿದ್ದು, ಸಾರ್ವಜನಿಕರು ಹೊರತು ಸರಕಾರವಾಗಲಿ ರಾಜಕಾರಿಣಿಗಳಲ್ಲ ಎಂದು ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಹೇಳಿದರು.
ಭಾನುವಾರ ಬ್ರಹ್ಮಾವರ ಬಂಟರ ಭವನದಲ್ಲಿ ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಪ್ರತಿವರ್ಷ ನೀಡುವ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಯನ್ನು ಕುಂದಾಪುರದ ವಾರಪತ್ರಿಕೆ ಕುಂದಪ್ರಭದ ಸಂಪಾದಕ ಯು.ಎಸ್ ಶೆಣೈ ಅವರಿಗೆ ಪ್ರಶಸ್ತಿ ಪ್ರದಾನ ಪ್ರದಾನ ಮಾಡಿ ಅವರು ಮಾತನಾಡಿದರು.
ವಡ್ಡರ್ಸೆ ರಘುರಾಮ ಶೆಟ್ಟಿ ಯವರ ಹೆಸರನ್ನು ಜೀವಂತವಿರಿಸುತ್ತಿರುವ ಬ್ರಹ್ಮಾವರ ತಾಲೂಕು ಪತ್ರಕರ್ತರು ಶ್ಲಾಘನೀಯರು ಎಂದರು.


ಸನ್ಮಾನಿತರಾದ ಯು.ಎಸ್ ಶೆಣೈ ಯವರು ಮಾತನಾಡಿ, ವಡ್ಡರ್ಸೆ ಅವರು ಆರ್ಥಿಕವಾಗಿ ಅಸಮರ್ಥರಾದವರಿಗೆ ನ್ಯಾಯ ದೊರಕಿಸಿಕೊಟ್ಟರಲ್ಲದೇ, ಅನೇಕ ಯುವ ಪತ್ರಕರ್ತರಿಗೆ ದಾರಿದೀಪವಾಗಿದ್ದರು ಎಂದರು.
ಕೋಟದ ಉದ್ಯಮಿ ಆನಂದ್ ಸಿ ಕುಂದರ್ ಕಾರ್ಯಕ್ರಮ ಉದ್ಘಾಟಿಸಿದರು. ಬ್ರಹ್ಮಾವರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಚಿತ್ತೂರು ಪ್ರಭಾಕರ ಆಚಾರ್ಯ ಅಧ್ಯಕ್ಷತೆ ವಹಿಸಿದ್ದರು.
ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ
ಮೂರ್ತಿ, ಜಿಲ್ಲಾ ಪತ್ರಕರ್ತರ ಸಂಘದ ಕಾರ್ಯದರ್ಶಿ ನಝೀರ್ ಪೊಲ್ಯ, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ,
ಕಾರ್ಯಕ್ರಮದ ಸಂಚಾಲಕ ವಸಂತ ಗಿಳಿಯಾರ್ ಸಂಘದ ಕಾರ್ಯದರ್ಶಿ ರಾಜೇಶ್ ಅಚ್ಲಾಡಿ, ಕೋಶಾಧಿಕಾರಿ ಮೋಹನ್ ಉಡುಪ, ಉಪಾಧ್ಯಕ್ಷ ಚಂದ್ರಶೇಖರ ಬೀಜಾಡಿ ಜಿಲ್ಲಾ ಸಂಘದ ಪ್ರತಿನಿಧಿ ಗಣೇಶ್ ಸಾಯಿಬರ ಕಟ್ಟೆ ಮತ್ತು ಸಂಘದ ಸದಸ್ಯರು ಉಪಸ್ಥಿತರಿದ್ದರು.
