ನವದೆಹಲಿ : ಜನತಾ ದಳ (ಯುನೈಟೆಡ್) ನ ರಾಜ್ಯಸಭಾ ಸಂಸದ ಮತ್ತು ಕೈಗಾರಿಕೋದ್ಯಮಿ ಮಹೇಂದ್ರ ಪ್ರಸಾದ್ ನಿಧನರಾಗಿದ್ದಾರೆ. ಅವರಿಗೆ 81 ವರ್ಷ ವಯಸ್ಸಾಗಿತ್ತು. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಭಾನುವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.
ಮಹೇಂದ್ರ ಪ್ರಸಾದ್ ಬಿಹಾರದಿಂದ ಏಳು ಬಾರಿ ರಾಜ್ಯಸಭಾ ಸಂಸದರಾಗಿದ್ದರು ಮತ್ತು ಒಂದು ಬಾರಿ ಲೋಕಸಭೆಗೆ ಚುನಾಯಿತರಾಗಿದ್ದರು.
1980 ರಲ್ಲಿ ಕಾಂಗ್ರೆಸ್ ಟಿಕೆಟ್ನಲ್ಲಿ ಮೊದಲ ಬಾರಿಗೆ ಲೋಕಸಭೆಗೆ ಚುನಾಯಿತರಾದರು. ಅವರು ದೀರ್ಘಕಾಲದವರೆಗೆ ಪಕ್ಷದೊಂದಿಗೆ ಇದ್ದರು. ಬಳಿಕ ಅವರು ಜನತಾ ದಳ ಮತ್ತು ನಂತರ ರಾಷ್ಟ್ರೀಯ ಜನತಾ ದಳ ಮತ್ತು ನಂತರ ಜೆಡಿಯು ಸೇರಿದರು.
Advertisement. Scroll to continue reading.

ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
In this article:Diksoochi news, diksoochi Tv, diksoochi udupi, JDU, mahendra Prasad

Click to comment