ಬೆಂಗಳೂರು: ಮಾಜಿ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿಗಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಂತ ಸ್ವಯಂ ನಿವೃತ್ತಿಯ ಅರ್ಜಿಗೆ ರಾಜ್ಯ ಸರ್ಕಾರ ಅನುಮೋದನೆ ಸೂಚಿಸಿದೆ ಎಂದು ತಿಳಿದುಬಂದಿದೆ.
ಸ್ವಯಂ ನಿವೃತ್ತಿಗೆ ಸರ್ಕಾರ ಒಪ್ಪಿಗೆ ಸೂಚಿಸಿದ ಕಾರಣ, ಭಾಸ್ಕರ್ ರಾವ್ ಅವರು ಡಿಸೆಂಬರ್ 31ರಂದು ಸ್ವಯಂ ನಿವೃತ್ತಿಯಾಗಲಿದ್ದಾರೆ ಎನ್ನಲಾಗಿದೆ.
2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದಂತ ಭಾಸ್ಕರ್ ರಾವ್, ಬಳಿಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಂಡಿದ್ದರು. ಈ ಬಳಿಕ ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆಯುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದರು.
Advertisement. Scroll to continue reading.

ಕೊನೆಗೂ ಎಡಿಜಿಪಿ ಭಾಸ್ಕರ್ ರಾವ್ ಅವರು ಸಲ್ಲಿಸಿದ್ದಂತ ಸ್ವಯಂ ನಿವೃತ್ತಿಗೆ ಸರ್ಕಾರ ಅನುಮೋದನೆ ನೀಡಿದ್ದು, ಡಿಸೆಂಬರ್ 31ಕ್ಕೆ ಐಪಿಎಸ್ ಹುದ್ದೆಯಿಂದ ನಿವೃತ್ತಿಯಾಗಲಿದ್ದಾರೆ ಎನ್ನಲಾಗಿದೆ.
In this article:Diksoochi news, diksoochi Tv, diksoochi udupi, IPS Officer Bhaskar Rao

Click to comment