Connect with us

Hi, what are you looking for?

Diksoochi News

ರಾಜ್ಯ

ಎಡಿಜಿಪಿ ಭಾಸ್ಕರ್ ರಾವ್ ಸ್ವಯಂ ನಿವೃತ್ತಿಗೆ ರಾಜ್ಯಸರ್ಕಾರ ಅನುಮೋದನೆ

3

ಬೆಂಗಳೂರು: ಮಾಜಿ ಪೊಲೀಸ್ ಆಯುಕ್ತ ಹಾಗೂ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾಸ್ಕರ್ ರಾವ್ ಅವರು ಸ್ವಯಂ ನಿವೃತ್ತಿಗಾಗಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದಂತ ಸ್ವಯಂ ನಿವೃತ್ತಿಯ ಅರ್ಜಿಗೆ ರಾಜ್ಯ ಸರ್ಕಾರ ಅನುಮೋದನೆ ಸೂಚಿಸಿದೆ ಎಂದು ತಿಳಿದುಬಂದಿದೆ.

ಸ್ವಯಂ ನಿವೃತ್ತಿಗೆ ಸರ್ಕಾರ ಒಪ್ಪಿಗೆ ಸೂಚಿಸಿದ ಕಾರಣ, ಭಾಸ್ಕರ್ ರಾವ್ ಅವರು ಡಿಸೆಂಬರ್ 31ರಂದು ಸ್ವಯಂ ನಿವೃತ್ತಿಯಾಗಲಿದ್ದಾರೆ ಎನ್ನಲಾಗಿದೆ.

2019-20ರ ಅವಧಿಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರ್ ಆಗಿದ್ದಂತ ಭಾಸ್ಕರ್ ರಾವ್, ಬಳಿಕ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿ ನೇಮಕಗೊಂಡಿದ್ದರು. ಈ ಬಳಿಕ ಐಪಿಎಸ್ ಹುದ್ದೆಗೆ ಸ್ವಯಂ ನಿವೃತ್ತಿ ಪಡೆಯುವ ಬಗ್ಗೆ ಸರ್ಕಾರಕ್ಕೆ ಮನವಿ ಮಾಡಿದ್ದರು.

Advertisement. Scroll to continue reading.

ಕೊನೆಗೂ ಎಡಿಜಿಪಿ ಭಾಸ್ಕರ್ ರಾವ್ ಅವರು ಸಲ್ಲಿಸಿದ್ದಂತ ಸ್ವಯಂ ನಿವೃತ್ತಿಗೆ ಸರ್ಕಾರ ಅನುಮೋದನೆ ನೀಡಿದ್ದು, ಡಿಸೆಂಬರ್ 31ಕ್ಕೆ ಐಪಿಎಸ್ ಹುದ್ದೆಯಿಂದ ನಿವೃತ್ತಿಯಾಗಲಿದ್ದಾರೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!