ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ: ಉಡುಪಿ ಜಿಲ್ಲಾ ಪಂಚಾಯತಿ ಮುಖ್ಯಕಾರ್ಯನಿರ್ವಣಾಧಿಕಾರಿ ಡಾ. ನವೀನ್ ಭಟ್ ಇವರ ವಿಶೇಷ ಆಸಕ್ತಿಯಿಂದ ಮಾಡಲಾದ ಬ್ರಹ್ಮಾವರ ಸಮುದಾಯ ಆರೋಗ್ಯ ಕೇಂದ್ರದ ಬಳಿ ಸಂಜೀವಿನಿ ಸ್ವಸಹಾಯ ಸಂಘದ 5 ಮಹಿಳೆಯರ ಸಂಜೀವಿನಿ ಕೆಫೆಯನ್ನು ಶನಿವಾರ ಉಡುಪಿ ಶಾಸಕ ಕೆ. ರಘುಪತಿ ಭಟ್ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿ, ಮಹಿಳೆಯರು ಸಂಜೀವಿನಿ ಸಂಘದ ಮೂಲಕ ಸ್ವಾವಲಂಬಿಗಳಾಗಿ ಜಿಲ್ಲೆಗೆ ಕೀರ್ತಿ ತರುವಂತೆ ಆಗಬೇಕು. ರಾಜ್ಯದ ಇತರ ಜಿಲ್ಲೆಯ ಮಹಿಳೆಯರಿಗೆ ಉಡುಪಿ ಜಿಲ್ಲೆ ಮಾದರಿಯಾಗಬೇಕು ಎಂದರು.

ಸ್ತ್ರೀ ಸಬಲೀಕರಣಕ್ಕೆ ಮುಂದಾದ 5 ಮಂದಿ ಮಹಿಳೆಯರಾದ ಒಕ್ಕೂಟದ ಅಧ್ಯಕ್ಷೆ ಬೇಬಿ , ಸೀಮಾ , ಅರ್ಚನಾ ಕೆ.ವಿ. ರೇಖಾ ಮತ್ತು ಆಶಾ ಶೈಲೇಶ್ ಕ್ಯಾಂಟೀನಿನ ಮಾಲಕರು.

ಎನ್ ಆರ್ ಎಲ್ ಎಂ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್, ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಇಬ್ರಾಹಿಂಪುರ್, ವಾರಂಬಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಫರ್ಜಾನ , ಅಧ್ಯಕ್ಷೆ ಗುಲಾಬಿ, ಬಿರ್ತಿ ರಾಜೇಶ್ ಶೆಟ್ಟಿ, ಉಪಾಧ್ಯಕ್ಷ ಸದಾನಂದ ಪೂಜಾರಿ, ಮಾಜಿ ಜಿಲ್ಲಾ ಪಂಚಾಯತಿ ಅಧ್ಯಕ್ಷ ಬಿ.ಭುಜಂಗ್ ಶೆಟ್ಟಿ , ಸ್ವಸಹಾಯ ಸಂಘದ ಅಧ್ಯಕ್ಷೆ ಬೇಬಿ, ವಾರಂಬಳ್ಳಿ ಗ್ರಾಮ ಪಂಚಾಯತಿ ಸದಸ್ಯ ದೇವಾನಂದ ನಾಯಕ್ , ಪ್ರಮುಖರಾದ ಬಿರ್ತಿ ರಾಜೇಶ್ ಶೆಟ್ಟಿ ಹಾಗೂ ವಾರಂಬಳ್ಳಿ ಗ್ರಾಮ ಪಂಚಾಯತ್ ಸದಸ್ಯರು, ಸ್ವಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
