ಮೂಳೂರು: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ಬಸ್ಸು ಡಿಕ್ಕಿ; ಸ್ಥಳದಲ್ಲೇ ಸಾವು
Published
1
ಕಾಪು: ರಸ್ತೆ ದಾಟಲು ನಿಂತಿದ್ದ ವ್ಯಕ್ತಿಗೆ ವೇಗ ಧೂತ ಬಸ್ಸು ಡಿಕ್ಕಿ ಹೊಡೆದ ಪರಿಣಾಮ, ಸ್ಥಳದಲ್ಲಿಯೇ ಮೃತ ಪಟ್ಟ ಧಾರುಣ ಘಟನೆ ಕಾಪು ಠಾಣಾ ವ್ಯಾಪ್ತಿಯ ಮೂಳೂರಿನಲ್ಲಿ ಶನಿವಾರ ರಾತ್ರಿ ಸಂಭವಿಸಿದೆ.
ಮೃತಪಟ್ಟವರನ್ನು ಮೂಳೂರು ನಿವಾಸಿ ಹರಿ ಓಂ ಯಾನೆ ರಮೇಶ್ ಜಿ ಎಂದು ಗುರುತಿಸಲಾಗಿದೆ. ಅವರು ಮೂಳೂರು ರಾಹೆ 66 ರ ಬಳಿಯ ಸಾಗರ ಹೋಟೇಲು ಎದುರು ರಸ್ತೆ ದಾಟಲು ನಿಂತಿದ್ದಾಗ, ಮಂಗಳೂರಿನಿಂದ ಉಡುಪಿಗೆ ಸಾಗುತ್ತಿದ್ದ ವೇಗಧೂತ ಬಸ್ಸು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಮೇಶ್ರವರ ತಲೆ ಜಜ್ಜಿ ಹೋಗಿದ್ದು, ಆಗಲೇ ಪ್ರಾಣ ಪಕ್ಷಿ ಹಾರಿ ಹೋಗಿದೆ. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.