Connect with us

Hi, what are you looking for?

Diksoochi News

ರಾಷ್ಟ್ರೀಯ

ಸಾವಿರಾರು ಅನಾಥ ಮಕ್ಕಳ ಪೋಷಿಸಿದ್ದ, ಪದ್ಮಶ್ರೀ ಪುರಸ್ಕೃತ ಸಿಂಧುತಾಯಿ ನಿಧನ

1

ಪುಣೆ: ಪದ್ಮಶ್ರೀ ಪುರಸ್ಕೃತೆ, ಖ್ಯಾತ ಸಮಾಜ ಸೇವಕಿ ಸಿಂಧೂತಾಯಿ ಸಪ್ಕಾಲ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.

ಅವರಿಗೆ 75 ವರ್ಷ ವಯಸ್ಸಾಗಿತ್ತು.ಪುಣೆಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಇತ್ತೀಚಿಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಗರದ ಗ್ಯಾಲಕ್ಸಿ ಕೇರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಒಂದೂವರೆ ತಿಂಗಳ ಹಿಂದೆ ಹರ್ನಿಯಾ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಚೇತರಿಸಿಕೊಂಡಿರಲಿಲ್ಲ ಎನ್ನಲಾಗಿದೆ.

Advertisement. Scroll to continue reading.

ರಾತ್ರಿ 8 ಗಂಟೆ ಸುಮಾರಿಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಶೈಲೇಶ್ ಪುಂಟಂಬೆಕರ್ ತಿಳಿಸಿದ್ದಾರೆ.

ಅನಾಥರಿಗೆ ತಾಯಿ:

ಸಿಂಧೂತಾಯಿ ಸಫ್ಕಾಲ್ ನವೆಂಬರ್ 14, 1948 ರಂದು ಮಹಾರಾಷ್ಟ್ರದ ವಾರ್ಧಾ ಜಿಲ್ಲೆಯಲ್ಲಿ ಜನಿಸಿದರು. 4 ನೇ ತರಗತಿಯಲ್ಲಿ ಉತ್ತೀರ್ಣರಾದ ನಂತರ ಶಾಲೆಯಿಂದ ಹೊರಗುಳಿಯಬೇಕಾಯಿತು. 12 ನೇ ವಯಸ್ಸಿನಲ್ಲಿ, ಅವರು 32 ವರ್ಷ ವಯಸ್ಸಿನ ವ್ಯಕ್ತಿಯೊಂದಿಗೆ ವಿವಾಹವಾದರು. ಮೂರು ಮಕ್ಕಳಿಗೆ ಜನ್ಮ ನೀಡಿದ ನಂತರ, ಆಕೆ ಗರ್ಭಿಣಿಯಾಗಿದ್ದಾಗಲೂ ಅವರ ಪತಿ ಅವರನ್ನು ತೊರೆದನು.

ಅವರ ಸ್ವಂತ ತಾಯಿ ಮತ್ತು ಅವಳು ಬೆಳೆದ ಊರು ಕೂಡ ಸಹಾಯ ಮಾಡಲು ನಿರಾಕರಿಸಿತು. ತನ್ನ ಹೆಣ್ಣು ಮಕ್ಕಳನ್ನು ಬೆಳೆಸಲು ಬೇಡಿಕೊಳ್ಳುವಂತೆ ಪರಿಸ್ಥಿತಿ ಮಾಡಿತು. ಆಗ ಸಂಪೂರ್ಣ ಇಚ್ಛಾಶಕ್ತಿಯಿಂದ ಈ ಕಷ್ಟ ಪರಿಸ್ಥಿತಿಯನ್ನು ಎದುರಿಸಿದ ಅವರು ಅನಾಥ ಮಕ್ಕಳ ಬಾಳಿಗೆ ಬೆಳಕಾದರು. 1,050 ಕ್ಕೂ ಹೆಚ್ಚು ಅನಾಥ ಮಕ್ಕಳನ್ನು ಬೆಳೆಸಿದ್ದಾರೆ. ಅವರ ಸೇವೆಗೆ ಕಳೆದ ವರ್ಷ ಪದ್ಮಶ್ರೀ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!