Connect with us

Hi, what are you looking for?

Diksoochi News

ಅಂತಾರಾಷ್ಟ್ರೀಯ

ಭಾರೀ ಹಿಮಪಾತ: ಹತ್ತು ಮಕ್ಕಳು ಸೇರಿದಂತೆ 22 ಜನರು ಸಾವು

2

ಲಾಹೋರ್: ಭಾರೀ ಹಿಮಪಾತಕ್ಕೆ ಹತ್ತು ಮಕ್ಕಳು ಸೇರಿದಂತೆ 22 ಜನರು ಸಾವನ್ನಪ್ಪಿರುವ ಘಟನೆ ಪಾಕಿಸ್ತಾನದ ಪಿರ್ ಪಂಜಾಲ್ ಶ್ರೇಣಿಯ ಗಲ್ಯತ್ ಪ್ರದೇಶದ ರೆಸಾರ್ಟ್ ಟೌನ್ ಮುರ್ರಿ ಹಿಲ್ ಸ್ಟೇಷನ್‌ ನಲ್ಲಿ ನಡೆದಿದೆ.

ಪ್ರವಾಸಿಗರ ದಟ್ಟಣೆಯ ಹೆಚ್ಚಳದಿಂದಾಗಿ ಈ ದುರಂತ ಸಂಭವಿಸಿದೆ ಎನ್ನಲಾಗಿದ್ದು, ಮುರ್ರೆಯನ್ನು ವಿಪತ್ತು ಪ್ರದೇಶವೆಂದು ಘೋಷಿಸಲಾಗಿದೆ.

ಪಾಕಿಸ್ತಾನದ ಗಿರಿಧಾಮ ಮುರ್ರೆ ನೋಡಲು ಬಂದಿದ್ದ ಅನೇಕ ಪ್ರವಾಸಿಗರು ರಾತ್ರಿಯಿಡೀ ಭಾರೀ ಹಿಮಪಾತದ ನಡುವೆ ಸಿಲುಕಿದ್ದಾರೆ. ಇಲ್ಲಿನ ರಸ್ತೆಗಳು ಸಂಪೂರ್ಣವಾಗಿ ಮುಚ್ಚಿಹೋಗಿದ್ದು, ಸಾವಿರಾರು ವಾಹನಗಳು ಗಿರಿಧಾಮದಲ್ಲಿ ಸಿಲುಕಿಕೊಂಡಿವೆ. ಈ ವೇಳೆ ವಾಹನಗಳ ನೂಕು ನುಗ್ಗಲು ಉಂಟಾಗಿದೆ. ಜನರು ಎಲ್ಲಿಯೂ ಹೋಗಲು ಸಾಧ್ಯವಾಗದೇ, ವಾಹನಗಳಲ್ಲೇ ಸಿಲುಕಿದ ಪರಿಣಾಮ ಹತ್ತು ಮಕ್ಕಳು ಸೇರಿದಂತೆ ಕನಿಷ್ಠ 22 ಜನರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!