ಬೆಂಗಳೂರು : ಮೇಕೆದಾಟು ಯೋಜನೆಗಾಗಿ ಆಗ್ರಹಿಸಿ ಇಂದಿನಿಂದ ಜನವರಿ 19 ರವರೆಗೆ ಕಾಂಗ್ರೆಸ್ ಪಾದಯಾತ್ರೆ ಹಮ್ಮಿಕೊಂಡಿದ್ದು, ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19ರಂದು ತಮಿಳುನಾಡು ಗಡಿ ಬಂದ್ ಮಾಡುತ್ತೇವೆ ಎಂದು ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಹೇಳಿದ್ದಾರೆ.
ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆಯನ್ನು ಬೆಂಬಲಿಸಿ ಜನವರಿ 19 ರಂದು ತಮಿಳುನಾಡು ಗಡಿ ಬಂದ್ ಮಾಡಲಾಗುವುದು. ಜನವರಿ 22ರಂದು ಟೌನ್ಹಾಲ್ನಿಂದ ಬೃಹತ್ ಮೆರವಣಿಗೆ ಮಾಡುತ್ತೇವೆ.
ತಮಿಳುನಾಡಿನ ಸಿಎಂ ಸ್ಟಾಲಿನ್ ಕರ್ನಾಟಕದ ಮೇಕೆದಾಟು ಯೋಜನೆಯನ್ನು ವಿರೋಧಿಸಬಾರದು. ಕಾಂಗ್ರೆಸ್ ನವರು ಕೇಂದ್ರ ಹಾಗೂ ರಾಜ್ಯದಲ್ಲಿ ಡಿಎಂಕೆ ನೀಡಿರುವ ಬೆಂಬಲವನ್ನು ವಾಪಸ್ ಪಡೆಯಬೇಕು. ಕನ್ನಡ ಪರ ಸಂಘಟನೆಗಳು ಈ ಹಿಂದೆಯೇ ಈ ಯೋಜನೆ ಶಂಕುಸ್ಥಾಪನೆ ಮಾಡಿದ್ದೆವು. ಸರ್ಕಾರ ಹಾಗೂ ರಾಜಕೀಯ ಪಕ್ಷಗಳು ಈ ವಿಷಯವನ್ನು ರಾಜಕೀಯ ಮಾಡಬಾರದು ಎಂದು ಹೇಳಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Mekedatu, Vatal Nagaraj

Click to comment