Connect with us

Hi, what are you looking for?

Diksoochi News

ಕರಾವಳಿ

ಶ್ರೀಕ್ಷೇತ್ರ ಮಾರಣಕಟ್ಟೆ: ಸರಳ ಮಕರ ಸಂಕ್ರಾಂತಿ ಆಚರಣೆ; ಸಾರ್ವಜನಿಕರಿಗೆ ಗೆಂಡ ಸೇವೆಗೆ ಅವಕಾಶವಿಲ್ಲ

4

ವರದಿ : ದಿನೇಶ್ ರಾಯಪ್ಪನಮಠ

ಕುಂದಾಪುರ : ಕೊರೋನಾ ಸೋಂಕು ರಾಜ್ಯಾದ್ಯಂತ ಆತಂಕ ಸೃಷ್ಟಿಸಿದೆ. ಎಲ್ಲಾ ಧಾರ್ಮಿಕ, ಸಾಮಾಜಿಕ ಕಾರ್ಯಕ್ರಮಗಳಿಗೆ ಕೋವಿಡ್ ತಣ್ಣೀರೆರೆಚುತ್ತಿದೆ. ಈ ನಡುವೆ ಜ.14 ರಂದು ನಡೆವ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮವೂ ತಣ್ಣಗಾಗಲಿದೆ.
ಶ್ರೀಕ್ಷೇತ್ರ ಮಾರಣಕಟ್ಟೆ ಶ್ರೀಬ್ರಹ್ಮಲಿಂಗೇಶ್ವರ ದೇವಸ್ಥಾನದಲ್ಲಿ ಸಾಂಪ್ರದಾಯಿಕವಾಗಿ ಸರಳವಾಗಿ ಮಕರ ಸಂಕ್ರಮಣ ಉತ್ಸವವನ್ನು ಕೋವಿಡ್ 19 ನಿಯಮಾವಳಿಯನ್ನು ಪಾಲಿಸಿ ಜರುಗಿಸಲಾಗುವುದು. ಭಕ್ತಾದಿಗಳು 2 ಡೋಸ್ ಕೋವಿಡ್ ಲಸಿಕೆ ಪಡೆದಿರಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್ ಧರಿಸಿದವರಿಗೆ ಮಾತ್ರ ಬೆಳಿಗ್ಗೆ ‌8.30 ರಿಂದ ಸಂಜೆ 6 ಘಂಟೆಯ ವರೆಗೆ ದೇವಸ್ಥಾನದ ಒಳಗೆ ಪ್ರವೇಶ ನೀಡಲಾಗುವುದು. ಗೆಂಡ ಸೇವೆಗೆ ಸಾರ್ವಜನಿಕರಿಗೆ ಅವಕಾಶವಿರುವುದಿಲ್ಲ. ದಿನಾಂಕ 15 ಮತ್ತು 16 ರಂದು ವಾರಾಂತ್ಯ ಕರ್ಫ್ಯೂ ಇದ್ದಲ್ಲಿ ಭಕ್ತಾದಿಗಳಿಗೆ ದೇವರ ದರ್ಶನಕ್ಕೆ ಮಾತ್ರ ಅವಕಾಶ ನೀಡಲಾಗುವುದು. ಯಾವುದೇ ಸೇವೆಗೆ ಅವಕಾಶ ಇರುವುದಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.

Advertisement. Scroll to continue reading.
Click to comment

Leave a Reply

Your email address will not be published. Required fields are marked *

Advertisement

You May Also Like

ಕರಾವಳಿ

0 ಬ್ರಹ್ಮಾವರ : ರುಡ್ ಸೆಟ್‌ ಬ್ರಹ್ಮಾವರ ಮತ್ತು ಸ್ಮಾರ್ಟ್‌ ಕ್ರೀಯೇಶನ್ಸ್‌ ಎಜ್ಯುಕೇಶನ್ ಟ್ರಸ್ಟ್ ಹೈಕಾಡಿ ಸಂಸ್ಥೆಯ ಸಹಭಾಗಿತ್ವದಲ್ಲಿ ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಹೈಕಾಡಿಯಲ್ಲಿ ಮೇಣದಬತ್ತಿ ತಯಾರಿಕಾ ತರಬೇತಿ ಉದ್ಘಾಟನೆಗೊಂಡಿತು. ಆವರ್ಸೆ...

error: Content is protected !!