ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೂ ನಿನ್ನೆ ಕೊರೋನಾ ದೃಢಪಟ್ಟಿತ್ತು. ಇಂದು ಚಿಕಿತ್ಸೆಗಾಗಿ ಓಲ್ಡ್ ಮದ್ರಾಸ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ.
ಕೋವಿಡ್ ದೃಢಪಟ್ಟಿರುವ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿನ್ನೆ ಟ್ವಿಟ್ಟರ್ ನಲ್ಲಿ ಮಾಹಿತಿ ನೀಡಿದ್ದರು. ನನಗೂ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ. ಯಾವುದೇ ತೀವ್ರ ತರದ ಲಕ್ಷಣಗಳಿಲ್ಲ. ಅರಾಮಾಗಿದ್ದೇನೆ. ನನ್ನ ಸಂಪರ್ಕಿತರು ಕೊರೋನಾ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡಿದ್ದರು.
ಇಂದು ಚಿಕಿತ್ಸೆಗಾಗಿ ಸಿಎಂ ಬಸವರಾಜ ಬೊಮ್ಮಾಯಿಯವರು ಹಳೆಯ ಮದ್ರಾಸ್ ರಸ್ತೆಯಲ್ಲಿರುವಂತ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದಾರೆ. ಹೀಗಾಗಿ ಅವರ ಎಲ್ಲಾ ಕಾರ್ಯಕ್ರಮಗಳನ್ನು ಸಿಎಂ ಕಚೇರಿಯಿಂದ ರದ್ದು ಪಡಿಸಲಾಗಿದೆ.
Advertisement. Scroll to continue reading.
