ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೋನಾ, ಓಮಿಕ್ರಾನ್ ಸೋಂಕು ಹೆಚ್ಚಳವಾಗುತ್ತಿದೆ. ಹೀಗಾಗಿ ಸರ್ಕಾರಿ ನೌಕರರ ಹಿತದೃಷ್ಠಿಯಿಂದ ರಾಜ್ಯ ಸರ್ಕಾರ ತಾತ್ಕಾಲಿಕವಾಗಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಿಂದ ವಿನಾಯಿತಿ ನೀಡಿ ಆದೇಶಿಸಲಾಗಿದೆ.
ಈ ಬಗ್ಗೆ ಸಿಬ್ಬಂದಿ ಮತ್ತು ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ರಾಜ್ಯದ ಹಲವಾರು ಕಡೆಯಲ್ಲಿ ಕೊರೋನಾ, ಒಮಿಕ್ರಾನ್ ವೈರಸ್ ಸೋಂಕು ಏರಿಕೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಸಚಿವಾಲಯ ಹಾಗೂ ಇನ್ನಿತರ ಸರ್ಕಾರಿ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ಸರ್ಕಾರಿ ಅಧಿಕಾರಿ, ಸಿಬ್ಬಂದಿಗಳ ಆರೋಗ್ಯದ ಹಿತದೃಷ್ಠಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ರಾಜ್ಯ ಸರ್ಕಾರದ ಅಧಿಕಾರಿ, ಸಿಬ್ಬಂದಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಮುಂದಿನ ಆದೇಶದವರೆಗೂ ವಿನಾಯಿತಿ ನೀಡಲಾಗಿದೆ.
ಆದರೆ, ಹಾಜರಾತಿ ಪುಸ್ತಕದಲ್ಲಿ ಸಹಿಯನ್ನು ನಿರ್ವಹಿಸುವಂತೆ ಮತ್ತು ಆಯಾ ಇಲಾಖೆಯ ನೋಡಲ್ ಅಧಿಕಾರಿಗಳು ಪರಿಶೀಲಿಸುವಂತೆ ಸೂಚಿಸಲಾಗಿದೆ.
Advertisement. Scroll to continue reading.

In this article:Biometric Attendance, Diksoochi news, diksoochi Tv, diksoochi udupi, government

Click to comment