ವರದಿ : ಬಿ.ಎಸ್.ಆಚಾರ್ಯ
ಬ್ರಹ್ಮಾವರ : ಕೋಡಿಕನ್ಯಾನ ಸೋಮ ಬಂಗೇರ ಸ್ಮಾರಕ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಜಯಂತಿ ಮತ್ತು ಯುವ ಸಂಸತ್ ಕಾರ್ಯಕ್ರಮ ನಡೆಯಿತು.
ಶಾಲಾ ಮುಖ್ಯೋಪಾಧ್ಯಾಯಿನಿ ರಾಧಿಕಾ, ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕೆಂದು ಕರೆ ನೀಡಿದರು. ಶಿಕ್ಷಕಿ ಶಶಿಕಲಾ ಸ್ವಾಮಿ ವಿವೇಕಾನಂದರ ಕುರಿತು ಗೀತಗಾಯನ ಕಾರ್ಯಕ್ರಮ ನಡೆಸಿಕೊಟ್ಟರು.
Advertisement. Scroll to continue reading.


ಶಾಲಾ ಸಂಸತ್ ನ್ನು ಉದ್ದೇಶಿಸಿ ವಿದ್ಯಾರ್ಥಿ ನಾಯಕ ಕು.ನಿಶ್ವಿತ್ (10ನೆಯ ತರಗತಿ), ಕು.ಶರಣ್ಯ (10 ನೆಯತರಗತಿ), ಕು.ಕಾವ್ಯಾ (9ನೆಯ ತರಗತಿ), ಕು.ಪ್ರತೀತಾ (8ನೆಯ ತರಗತಿ) ಸ್ವಾಮಿ ವಿವೇಕಾನಂದರ ಕುರಿತು ಮಾತನಾಡಿದರು.
ನಂತರ ನಡೆದ ಚರ್ಚೆಯಲ್ಲಿ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷದ ವಿದ್ಯಾರ್ಥಿ ಸದಸ್ಯರು ಭಾಗವಹಿಸಿ, ಶಾಲಾ ಸಮಸ್ಯೆಗಳ ಕುರಿತು ಚರ್ಚಿಸಿ ಪರಿಹಾರೋಪಾಯಗಳನ್ನು ಕಂಡುಕೊಂಡರು.
ಶಿಕ್ಷಕಿ ಜ್ಯೋತಿ ಕೃಷ್ಣಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ದಿನಕರ ಶೆಟ್ಟಿ ಬಿ. ವಂದಿಸಿದರು.
Advertisement. Scroll to continue reading.

In this article:Diksoochi news, diksoochi Tv, diksoochi udupi, kodikanyana, Swami Vivekananda Jayanthi

Click to comment