ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಕಟ್ಟೆ ರಾಮಚಂದ್ರ (75) ಇಂದು ಮುಂಜಾನೆ ಇಹಲೋಕ ತ್ಯಜಿಸಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಕಟ್ಟೆ ರಾಮಚಂದ್ರ ಅವರಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದರು.
ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ 5 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ನಾಲ್ಕು ದಿನಗಳ ಹಿಂದೆಯಷ್ಟೇ ಅವರ ಪತ್ನಿ ನಿಧನರಾಗಿದ್ದರು.
Advertisement. Scroll to continue reading.

ಕಟ್ಟೆ ರಾಮಚಂದ್ರ ಅವರು ನಿರ್ದೇಶಕ ಹಾಗೂ ನಿರ್ಮಾಪಕರಾಗಿ ಹಿರಿತೆರೆ, ಕಿರುತೆರೆಯಲ್ಲಿ ಸೇವೆ ಸಲ್ಲಿಸಿದ್ದರು.
ಅರಿವು ಮತ್ತು ಡಾ. ವಿಷ್ಣುವರ್ಧನ್ ಅವರು ಅಭಿನಯದ ವೈಶಾಖದ ದಿನಗಳು ಎಂಬ ಚಿತ್ರಗಳನ್ನು ಕಟ್ಟೆ ರಾಮಚಂದ್ರ ಅವರು ನಿರ್ಮಾಣ ಮಾಡಿದ್ದರು. ಅಲ್ಲದೇ ಮನೆ ಮನೆ ಕಥೆ, ಅಲೆಗಳು ಎಂಬ ಧಾರವಾಹಿಯಲ್ಲಿ ನಟಿಸಿದ್ದರು. ತನು ನಿನ್ನದು ಮನ ನಿನ್ನದು ಎಂಬ ಧಾರಾವಾಹಿಯನ್ನು ನಿರ್ದೇಶನ-ನಿರ್ಮಾಣ ಮಾಡಿದ್ದಾರೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Director Katte Ramachandra

Click to comment