Connect with us

Hi, what are you looking for?

Diksoochi News

ಕರಾವಳಿ

ಕಾರ್ಕಳ : ಬೈಕ್ ಗೆ ಕಾರು ಡಿಕ್ಕಿ; ಇಬ್ಬರಿಗೆ ಗಾಯ

2

ವರದಿ : ಶ್ರೀದತ್ತ ಹೆಬ್ರಿ

ಕಾರ್ಕಳ: ಬೈಕ್ ಗೆ ಕಾರು ಡಿಕ್ಕಿ ಹೊಡೆದು ಸವಾರರಿಬ್ಬರು ಗಾಯಗೊಂಡಿರುವ ಘಟನೆ ಹಿರ್ಗಾನ ಬಳಿ ನಡೆದಿದೆ. ಪಡುಕುಡೂರಿನ ರಾಜೇಶ್ ಆಚಾರ್ಯ(32), ತಂದೆ ನಾರಾಯಣ ಆಚಾರ್ಯ(60) ಗಾಯಗೊಂಡವರು. ರಾಜೇಶ್ ಆಚಾರ್ಯ ತನ್ನ ತಂದೆ ನಾರಾಯಣ ಆಚಾರ್ಯರೊಂದಿಗೆ ಅಜೆಕಾರು ಕಡೆಯಿಂದ ಕಾರ್ಕಳ ಕಡೆಗೆ ರಾಜ್ಯ ಹೆದ್ದಾರಿಯಲ್ಲಿ ಹೋಗುತ್ತಿದ್ದ ವೇಳೆ ಹಿರ್ಗಾನ ಗ್ರಾಮದ ಕೊತ್ತಳಿಗೆ ಬಳಿ ಅಜೆಕಾರು ಕಡೆಯಿಂದ ಕಾರ್ಕಳ ಕಡೆಗೆ ಹೋಗುತ್ತಿದ್ದ ಕಾರು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.

ಪರಿಣಾಮ ರಾಜೇಶ್ ಹಾಗೂ ನಾರಾಯಣ ಅವರು ನೆಲಕ್ಕೆ ಬಿದ್ದಿದ್ದು, ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Advertisement. Scroll to continue reading.

ಕಾರು ಚಾಲಕನ ಅತಿ ವೇಗ, ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!