Connect with us

Hi, what are you looking for?

Diksoochi News

ರಾಜ್ಯ

ಜ.31 ರಿಂದ ನೈಟ್ ಕರ್ಫ್ಯೂ ರದ್ದು; ಹೊಟೇಲ್, ರೆಸ್ಟೋರೆಂಟ್ ಶೇ.50 ರಷ್ಟು ಮಿತಿ ವಾಪಾಸ್ : ಸಚಿವ ಆರ್.ಅಶೋಕ್

1

ಬೆಂಗಳೂರು: ಕೊರೋನಾ ನಿಯಂತ್ರಣಕ್ಕಾಗಿ ರಾಜ್ಯಾದ್ಯಂತ ಜಾರಿಗೊಳಿಸಲಾಗಿದ್ದಂತ ನೈಟ್ ಕರ್ಪ್ಯೂವನ್ನು ಜ.31 ರಿಂದ ರದ್ದುಪಡಿಸಲಾಗಿದೆ. ಇದಲ್ಲದೇ ಹೊಟೇಲ್, ರೆಸ್ಟೋರೆಂಟ್, ಪಬ್ ಗಳಲ್ಲಿನ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕೋವಿಡ್ ಸಭೆ ನಡೆಯಿತು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾ ಮಂದಿರಗಳಲ್ಲಿ ಶೇ.50ರ ಮಿತಿಯನ್ನು ಮುಂದುವರೆಸಲಾಗಿದೆ ಎಂದರು.

Advertisement. Scroll to continue reading.

ಇಂದು ತಜ್ಞರು ನೀಡಿದಂತ ವರದಿಯ ಆಧಾರದ ಮೇಲೆ ಹಲವು ವಿಚಾರಗಳನ್ನು ಚರ್ಚಿಸಲಾಗಿದೆ. ರಾಜ್ಯದಲ್ಲಿ 0-14 ವರ್ಷ 22,318 ಮಕ್ಕಳಿಗೆ ಕೊರೋನಾ, 6,307 ಜನರು ಕೋವಿಡ್ ನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. 401 ಮಕ್ಕಳು ಮಾತ್ರವೇ ಕೊರೋನಾದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. 146 ಮಕ್ಕಳು ಮಾತ್ರವೇ ಕೋವಿಡ್ ನಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದರು.

ಕರ್ನಾಟಕದಲ್ಲಿ ಕೋವಿಡ್ ಪಾಸಿಟಿವಿಟಿ ದರ 19-01-2022ರಂತೆ ಶೇ.18.08ರಷ್ಟಿದೆ. ಪೀಕ್ ಸಂದರ್ಭದಲ್ಲಿ ಶೇ.33ರಷ್ಟು ಇತ್ತು. ಈಗ 20.09ರಷ್ಟಕ್ಕೆ ಬಂದಿದೆ. ಈಗ ಕೋವಿಡ್ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರೋ ಕಾರಣದಿಂದಾಗಿ ಜನವರಿ 31ರಿಂದ ಜಾರಿಗೆ ಬರುವಂತೆ ರಾಜ್ಯಾದ್ಯಂತ ನೈಟ್ ಕರ್ಪ್ಯೂ ಅನ್ನು ರದ್ದು ಪಡಿಸಲಾಗಿದೆ ಎಂಬುದಾಗಿ ತಿಳಿಸಿದರು.

ಮುಚ್ಚಿದ ಸ್ಥಳಗಳಲ್ಲಿ 200 ಜನರಿಗೆ ಮದುವೆಗೆ ಅವಕಾಶ, ಓಪನ್ ಸ್ಥಳದಲ್ಲಿ 300ಕ್ಕೆ ಅವಕಾಶ ನೀಡಲಾಗಿದೆ. ಕಚೇರಿ ಕೆಲಸದ ಶೇ.50ರ ಮಿತಿಯನ್ನು ವಾಪಾಸ್ ಪಡೆಯಲಾಗಿದೆ. ಧಾರ್ಮಿಕ ಸ್ಥಳಗಳಲ್ಲಿ ಸೇವೆ ಬಂದ್ ಆಗಿತ್ತು. ಆ ಸೇವೆಗಳನ್ನು ಪುನರಾರಂಭಿಸೋದಕ್ಕೆ ಅವಕಾಶ ನೀಡಲಾಗಿದೆ. ಅರ್ಚನೆ, ಮಂಗಳಾರತಿಗೆ ಅವಕಾಶ ನೀಡಲಾಗಿದೆ. ಶೇ.50ರ ಜನರ ಮಿತಿ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

ಜಾತ್ರೆ, ರ್ಯಾಲಿ, ಧರಣಿ, ಪ್ರತಿಭಟನೆ ಸೇರಿದಂತೆ ಹೆಚ್ಚು ಜನರು ಸೇರುವಂತ ಕಾರ್ಯಕ್ರಮಗಳನ್ನು ನಿರ್ಬಂಧಿಸಲಾಗಿದೆ. ಜಿಮ್ ಗಳಿಗೆ ಶೇ.50ರ ಮಿತಿಯನ್ನು ನಿಗದಿ ಪಡಿಸಲಾಗಿದೆ. ಸ್ಪೋರ್ಟ್ಸ್ ಸ್ಟೇಡಿಯಂಗಳ ಮಿತಿ ಶೇ.50ರಷ್ಟು ಮುಂದುವರೆಸಲಾಗಿದೆ. ಮಹಾರಾಷ್ಟ್ರ, ಕೇರಳ, ಗೋವಾದಿಂದ ಬರೋರಿಗೆ ಕೋವಿಡ್ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ ಎಂದರು.

Advertisement. Scroll to continue reading.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!