Connect with us

Hi, what are you looking for?

Diksoochi News

ರಾಷ್ಟ್ರೀಯ

ಜೈಪುರ: ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ; ನಾಲ್ವರು ಸಜೀವ ದಹನ

2

ಜೈಪುರ: ಟರ್ಪಂಟೈನ್ ತೈಲ ತಯಾರಿಕಾ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಜಮ್ವರಂಗಢ ಪ್ರದೇಶದ ಧುಲರಾವ್ಜಿಯಲ್ಲಿ ಭಾನುವಾರ ನಡೆದಿದೆ.

ಘಟನಾ ಸ್ಥಳಕ್ಕೆ ನಾಗರಿಕ ರಕ್ಷಣಾ ತಂಡ ಮತ್ತು ಪೊಲೀಸರು ಕೂಡ ಸ್ಥಳಕ್ಕೆ ಆಗಮಿಸಿದ್ದು,ಅಗ್ನಿಶಾಮಕ ದಳದ ಸಹಾಯದಿಂದ ಬೆಂಕಿಯನ್ನು ಹತೋಟಿಗೆ ತರಲಾಗಿದೆ ಎಂದು ತಿಳಿದು ಬಂದಿದೆಮ

ಕಾರ್ಖಾನೆ ಮಾಲೀಕರು ಸ್ವಂತ ಮನೆಯಲ್ಲಿ ಕಾರ್ಖಾನೆ ಸ್ಥಾಪಿಸಿದ್ದರು ಎಂದು ಹೇಳಲಾಗಿದೆ. ಸುದ್ದಿ ತಿಳಿಯುತ್ತಿದ್ದಂತೆ ತಕ್ಷಣ ಜಮ್ವರಂಗಢ ಆರ್‌ಪಿಎಸ್ ಅಧಿಕಾರಿ ಶಿವಕುಮಾರ್ ಭಾರದ್ವಾಜ್, ಜಾಮ್‌ವರಂಗಢ ಪೊಲೀಸ್ ಠಾಣಾಧಿಕಾರಿ, ರೈಸರ್ ಪೊಲೀಸ್ ಠಾಣಾಧಿಕಾರಿ, ಜಾಮ್‌ವರಂಗಢ ಎಸ್‌ಡಿಎಂ ಕೂಡ ಸ್ಥಳಕ್ಕೆ ಆಗಮಿಸಿದ್ದು, ಪರಶೀಲನೆ ನಡೆಸಿದ್ದಾರೆ. ಇನ್ನು ಅಗ್ನಿಶಾಮಕ ದಳದ ವಾಹನಗಳ ಸಹಾಯದಿಂದ ಬೆಂಕಿಯನ್ನ ನಿಯಂತ್ರಿಸಿದ್ದಾರೆ.

Advertisement. Scroll to continue reading.

ಕಾರ್ಖಾನೆಯಲ್ಲಿನ ಬೆಂಕಿಯಿಂದಾಗಿ ನಾಲ್ಕು ಮಂದಿ ಸುಟ್ಟು ಕರಕಲಾಗಿದ್ದಾರೆ. ಅವರಲ್ಲಿ ಮೂವರು ಮಕ್ಕಳು, ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಭಸ್ಮವಾಗಿವೆ ಎನ್ನಲಾಗಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!