Connect with us

Hi, what are you looking for?

Diksoochi News

ರಾಜ್ಯ

ಐತಿಹಾಸಿಕ ಬೆಂಗಳೂರು ಕರಗ ಉತ್ಸವಕ್ಕೆ ಅನುಮತಿ

0

ಬೆಂಗಳೂರು: ಕಳೆದ 2 ವರ್ಷಗಳಿಂದ ಬೆಂಗಳೂರು ಕರಗಕ್ಕೆ ಕೊರೋನಾ ಕಾರಣದಿಂದಾಗಿ ಅನುಮತಿ ನೀಡಲಾಗಿರಲಿಲ್ಲ. ಕೇವಲ ಸಾಂಪ್ರದಾಯಿಕ, ಸರಳ ಕರಗಕ್ಕೆ ಮಾತ್ರವೇ ಅವಕಾಶ ನೀಡಲಾಗಿತ್ತು. ಈಗ ಕೋವಿಡ್ ಪ್ರಕರಣಗಳು ಇಳಿಕೆಯಾದ ಹಿನ್ನೆಲೆಯಲ್ಲಿ ಈ ಬಾರಿ ಅದ್ಧೂರಿ ಕರಗ ಆಚರಣೆಗೆ ಬಿಬಿಎಂಪಿ ಷರತ್ತು ಬದ್ಧ ಅನುಮತಿಯನ್ನು ನೀಡಿದೆ.

ರಾಜ್ಯ ಸೇರಿದಂತೆ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡಿದೆ. ಹೀಗಾಗಿ ಬೆಂಗಳೂರಿನ ಕರಗ ಉತ್ಸವಕ್ಕೆ ಅನುಮತಿ ನೀಡುವಂತೆ ರಾಜ್ಯ ಸರ್ಕಾರಕ್ಕೆ, ಬಿಬಿಎಂಪಿಗೆ ಅನುಮತಿ ಕೋರಿ ಕರಗ ಉತ್ಸವ ಸಮಿತಿಯ ಅಧ್ಯಕ್ಷ ಪಿ.ಆರ್.ರಮೇಶ್ ಪತ್ರ ಬರೆದಿದ್ದರು.

ಈ ನಡುವೆ ಸುಮಾರು 800 ವರ್ಷಗಳ ಇತಿಹಾಸವಿರೋ ಬೆಂಗಳೂರು ಕರಗ ಉತ್ಸವಕ್ಕೆ ಬಿಬಿಎಂಪಿ ಷರತ್ತು ಬದ್ಧ ಅನುಮತಿ ನೀಡಲಾಗಿದೆ.

Advertisement. Scroll to continue reading.

ಮಾರ್ಚ್ 8 ರಂದು ಬೆಂಗಳೂರಿನ ಸುಪ್ರಸಿದ್ಧ ಧರ್ಮರಾಯಸ್ವಾಮಿ, ದ್ರೌಪದಮ್ಮ ಕರಗದ ಉತ್ಸವ ಅದ್ಧೂರಿಯಾಗಿ ನಡೆಯಲಿದೆ.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!