ಬೆಂಗಳೂರು: ಹಿಜಾಬ್ ಮತ್ತು ಕೇಸರಿ ಶಾಲು ಸಂಘರ್ಷದಿಂದಾಗಿ ಈಗಾಗಲೇ ಪದವಿ ಕಾಲೇಜುಗಳಿಗೆ ರಜೆಯನ್ನು ವಿಸ್ತರಣೆ ಮಾಡಲಾಗಿದೆ. ಇದೀಗ ಪದವಿ ಪೂರ್ವ ಕಾಲೇಜುಗಳಿಗೆ ಫೆಬ್ರವರಿ 15ರವರೆಗೆ ರಜೆಯನ್ನು ಘೋಷಿಸಲಾಗಿದೆ.
ಸರ್ಕಾರದ ಉಪ ಕಾರ್ಯದರ್ಶಿ, ಸುತ್ತೋಲೆ ಹೊರಡಿಸಿದ್ದು, ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಫೆಬ್ರವರಿ 12, 13 ರ ಭಾನುವಾರ ರಜಾ ದಿನ ಸಹಿತವಾಗಿ ಫೆಬ್ರವರಿ 14, 15ರವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ರಜೆಯನ್ನು ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
Advertisement. Scroll to continue reading.