ನವದೆಹಲಿ : ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ಬಿಹಾರದ ಮಾಜಿ ಸಿಎಂ ಲಾಲೂ ಪ್ರಸಾದ್ ಯಾದವ್ ದೋಷಿ ಎಂದು ರಾಂಚಿ ವಿಶೇಷ ಕೋರ್ಟ್ ತೀರ್ಪು ನೀಡಿದೆ.
ಮೇವು ಹಗರಣದಲ್ಲಿ ಆರ್ ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ದೋಷಿ ಎಂದು ರಾಂಚಿಯ ಸಿಬಿಐ ವಿಶೇಷ ನ್ಯಾಯಾಲಯ ಮಹತ್ವದ ತೀರ್ಪು ನೀಡಿದೆ.
ಇಂದು ಬೆಳಗ್ಗೆ ಸಿಬಿಐ ವಿಶೇಷ ನ್ಯಾಯಾಲಯ ಮುಂದೆ ವಿಚಾರಣೆಗೆ ಲಾಲೂ ಪ್ರಸಾದ್ ಯಾದವ್ ಆಗಮಿಸಿದ್ದರು.
Advertisement. Scroll to continue reading.

ಮೇವು ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಐದನೇ ಮತ್ತು ಅಂತಿಮ ತೀರ್ಪು ನೀಡಿದ ರಾಂಚಿ ವಿಶೇಷ ಸಿಬಿಐ ನ್ಯಾಯಾಲಯ ಇತರ 75 ಆರೋಪಿಗಳೊಂದಿಗೆ ಲಾಲು ಪ್ರಸಾದ್ ಯಾದವ್ ಅವರನ್ನು ದೋಷಿ ಎಂದು ತೀರ್ಪು ನೀಡಿದೆ. ಸಿಬಿಐ ವಿಶೇಷ ನ್ಯಾಯಾಧೀಶ ಎಸ್ಕೆ ಶಶಿ ಅವರು 6 ಮಹಿಳೆಯರು ಸೇರಿದಂತೆ 24 ಆರೋಪಿಗಳನ್ನು ಸಾಕಷ್ಟು ಸಾಕ್ಷ್ಯಾಧಾರಗಳಿಲ್ಲದ ಕಾರಣ ಖುಲಾಸೆಗೊಳಿಸಿ ಆದೇಶಿಸಿದ್ದಾರೆ.
ಲಾಲೂ ಪ್ರಸಾದ್ ಯಾದವ್ ಅವರಿಗೆ ಶಿಕ್ಷೆಯ ಪ್ರಮಾಣವನ್ನು ಫೆಬ್ರವರಿ 18 ರಂದು ಘೋಷಿಸಲಾಗುವುದು ಎಂದು ನ್ಯಾಯಾಲಯ ಹೇಳಿದೆ.
Advertisement. Scroll to continue reading.

In this article:Diksoochi news, diksoochi Tv, diksoochi udupi, Lalu Prasad Yadav, Ranchi

Click to comment