ಬೆಂಗಳೂರು : ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿರುವ ಹಿಜಾಬ್ ಕೇಸರಿ ಶಾಲು ಪ್ರಕರಣದ ವಿಚಾರಣೆ ಇಂದು ಮತ್ತೆ ಹೈಕೋರ್ಟ್ ತ್ರೀ ಸದಸ್ಯ ಪೀಠದಲ್ಲಿ ನಡೆದಿದ್ದು, ನಾಳೆ ಮಧ್ಯಾಹ್ನ 2.30 ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ.
ನ್ಯಾ.ಕೃಷ್ಣಾ ಎಸ್.ದೀಕ್ಷಿತ್, ಸಿಜೆ ರಿತುರಾಜ್ ಅವಸ್ತಿ, ನ್ಯಾ.ಖಾಜಿ ಜೈಬಿನ್ನೀಸಾ ಮೊಹಿಯುದ್ದೀನ್ ಅವರನ್ನೊಳಗೊಂಡ ತ್ರಿಸದಸ್ಯ ಪೀಠದಿಂದ ವಿಚಾರಣೆ ನಡೆಯಿತು.
ಅರ್ಜಿದಾರರ ಪರ ರವಿ ವರ್ಮ ಕುಮಾರ್, ಯೂಸೂಫ್ ಮುಚ್ಚಾಲ ವಾದ ಮಂಡಿಸಿದರು.
Advertisement. Scroll to continue reading.
ಸುದೀರ್ಘ ವಿಚಾರಣೆಯ ಬಳಿಕ ನಾಳೆಗೆ ವಿಚಾರಣೆ ಮುಂದೂಡಲಾಗಿದೆ. ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಡೆಯಲಿದೆ.