Connect with us

Hi, what are you looking for?

Diksoochi News

ಕರಾವಳಿ

ಹೆಬ್ರಿ, ಕಾರ್ಕಳ ತಾಲೂಕು ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರೇ ಕಮಿಷನ್‌ ಏಜೆಂಟ್ ; ಹಣ ಕೊಡದೇ ಕಡತ ವಿಲೇವಾರಿ ಇಲ್ಲ : ತಾಲೂಕು ಕಚೇರಿಯನ್ನೇ ಬಿಜೆಪಿ ಕಚೇರಿ ಮಾಡಿ : ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಂಜುನಾಥ ಪೂಜಾರಿ ಆಕ್ರೋಶ

1

ವರದಿ : ಶ್ರೀದತ್ತ ಹೆಬ್ರಿ

ಹೆಬ್ರಿ : ಕಾರ್ಕಳ ಕ್ಷೇತ್ರದ ಕಂದಾಯ ಮತ್ತು ಸರ್ವೆ ಇಲಾಖೆಯಲ್ಲಿ ಯಾವೂದೇ ಕಡತಗಳ ವಿಲೇವಾರಿ ಆಗುತ್ತಿಲ್ಲ. ವರ್ಷಗಟ್ಟಲೇ ಕಡತ ಹಿಡಿದುಕೊಂಡು ಅಲೆದಾಟ ಮಾಡಬೇಕಿದೆ. ಕಾರ್ಕಳ ಹೆಬ್ರಿಗೆ ಒಬ್ಬರೇ ತಹಶೀಲ್ದಾರ್ ಇದ್ದಾರೆ. ಅವರಿಗೆ ಕೆಲಸದ ಒತ್ತಡ ವಿದೆ. ಜನತೆಗೆ ನ್ಯಾಯ ಕೊಡಲು ಹೇಗೆ ಸಾಧ್ಯ. ಬಿಜೆಪಿಯ ಕಾರ್ಯಕರ್ತರನ್ನು ಕೂರಿಸಿಕೊಂಡು ತಹಶೀಲ್ದಾರ್‌ ಕಡತ ವಿಲೇವಾರಿ ಮಾಡುತ್ತಾರೆ. ಹಾಗಾದರೇ ತಾಲ್ಲೂಕು ಕಚೇರಿಯಾಕೆ, ತಾಲ್ಲೂಕು ಕಚೇರಿಯನ್ನೇ ಬಿಜೆಪಿ ಕಚೇರಿ ಮಾಡಿಕೊಳ್ಳಲಿ ಎಂದು ಮಂಜುನಾಥ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ಗುರುವಾರ ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಕಚೇರಿಯಲ್ಲಿ ಅವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.

Advertisement. Scroll to continue reading.

ತಾಲ್ಲೂಕು ಕಚೇರಿಯಲ್ಲಿ ಕಮಿಷನ್‌ ಕೊಟ್ಟರೆ ಮಾತ್ರ ಕೆಲಸಗಳು ಆಗುತ್ತಿದೆ. ಭ್ರಷ್ಟಾಚಾರ ತುಂಬಿ ಹೋಗಿದೆ. ಹಣ ಕೊಟ್ಟರೇ ಮಾತ್ರ ಕೆಲಸ ಎಂಬ ಸ್ಥಿತಿ ನಿರ್ಮಾಣವಾಗಿದೆ. ಡಿಸಿಯು ಭ್ರಷ್ಟ ಅಧಿಕಾರಿಗಳನ್ನು ವಜಾ ಮಾಡಲಿ. ಬಿಜೆಪಿ ಪಕ್ಷದ ಕಾರ್ಯಕರ್ತರೇ ಮಧ್ಯವರ್ತಿಗಳಾಗಿ ತಾಲ್ಲೂಕು ಕಚೇರಿಯಲ್ಲಿ ಕೆಲಸ ಮಾಡಿಸಿಕೊಡುತ್ತಾರೆ ಎಂದರು.

ಕಾರ್ಕಳ ಕ್ಷೇತ್ರದ ಹೆಬ್ರಿ ಮತ್ತು ಕಾರ್ಕಳ ತಾಲ್ಲೂಕು ಕಚೇರಿಯಲ್ಲಿ ಸಚಿವ ಸುನಿಲ್‌ ಕುಮಾರ್‌ ಬಾಕಿ ಇರುವ ಕಡತಗಳನ್ನು ವಿಲೇವಾರಿ ಮಾಡಲು ಅಭಿಯಾನ ನಡೆಸುತ್ತಿರುವುದು ಒಳ್ಳೆಯ ವಿಚಾರ. ಆದರೆ ಕಡತಗಳನ್ನು ಬಾಕಿ ಇರಿಸುವುದು ಯಾಕೆ? ಅಧಿಕಾರಿಗಳೇ ಕಡತವನ್ನು ಬಾಕಿ ಇರಿಸಿಕೊಳ್ಳುತ್ತಾರೋ ಅಥವಾ ಜನಪ್ರತಿನಿಧಿಗಳು ಕಡತ ಬಾಕಿ ಇಡಲು ಹೇಳುತ್ತಾರೋ ಅದು ಬಹಿರಂಗವಾಗಬೇಕು. ಅಂದಿನ ಮುಖ್ಯ ಮಂತ್ರಿ ಸದಾನಂದ ಗೌಡ ಅವರು ಮುಖ್ಯಮಂತ್ರಿ ಆಗಿದ್ದಾಗ ಶೀಘ್ರ ಕಡತ ವಿಲೇವಾರಿಗೆ ಆರಂಭಿಸಿದ ಸಕಾಲ ಯೋಜನೆ ಕಾಲವಾಯಿತೇ ಪ್ರಶ್ನಿಸಿದ್ದಾರೆ.

ಮಾತೃ ಇಲಾಖೆಯಾದ ಕಂದಾಯ ಇಲಾಖೆಯಲ್ಲಿ ಎಸಿಯಿಂದ ಹಿಡಿದು ಸಾಮಾನ್ಯ ನೌಕರರ ವರೆಗೂ ಲಂಚದ ಬದಲು ಕಮೀಷನ್‌ ಹೆಸರಿನಲ್ಲಿ ಲೂಟಿ ಮಾಡುತ್ತಿದ್ದಾರೆ, ಸಾಮಾನ್ಯ ಜನರ ಕೆಲಸಗಳೇ ಆಗುತ್ತಿಲ್ಲ, ಡಿಸಿ ಎಲ್ಲಾ ವಿಚಾರಗಳ ಬಗ್ಗೆ ತನಿಖೆ ನಡೆಸಲಿ ಎಂದು ಮಂಜುನಾಥ ಪೂಜಾರಿ ಹೇಳಿದರು.

ಬಿಜೆಪಿ ಜನರ ಬದುಕಿನಲ್ಲಿ ಚೆಲ್ಲಾಟ ಆಡುತ್ತಿದೆ : ನೀರೆ ಕೃಷ್ಣ ಶೆಟ್ಟಿ

ಭೂಮಿ ಮನೆ ನೀರು ಜನರ ಬದುಕಿನ ಪ್ರಮುಖ ವಿಚಾರ, ಆದರೆ ಬಿಜೆಪಿ ಸರ್ಕಾರ ಜನರಿಗೆ ಒಂದೇ ಒಂದು ಉಪಯೋಗ ಆಗುವ ಕೆಲಸ ಮಾಡುತ್ತಿಲ್ಲ, ಧರ್ಮದ ಹೆಸರಿನಲ್ಲಿ ಮನೆ ಮನವನ್ನು ಒಡೆದು ಆಳುತ್ತಿದೆ, ಧರ್ಮದ ಹೆಸರಿನ ಅಪಪ್ರಚಾರವೇ ಬಿಜೆಪಿಯ ಮತ ಪಡೆಯುವ ತಂತ್ರ, ಡೀಮ್ಡ್‌ ಫಾರೆಸ್ಟ್‌ ಸಮಸ್ಯೆಯನ್ನು ಮುಂದಿನ ಚುನಾವಣೆಗಾಗಿ ಜನರಿಗೆ ಆಸೆ ಹುಟ್ಟಿಸಿ ನಾಟಕ ಆಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್‌ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ದೂರಿದರು.

Advertisement. Scroll to continue reading.

ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಕಬ್ಬಿನಾಲೆ ರಂಜನಿ ಹೆಬ್ಬಾರ್‌, ಹೆಬ್ರಿ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ ಹೆಚ್.ಬಿ.ಸುರೇಶ್‌, ಯುವ ಕಾಂಗ್ರೆಸ್‌ ಅಧ್ಯಕ್ಷ ದಿನೇಶ ಶೆಟ್ಟಿ,ಹೆಬ್ರಿ ಬ್ಲಾಕ್‌ ಕಾಂಗ್ರೆಸ್‌ ಕಾರ್ಯದರ್ಶಿ ಎಚ್.ಜನಾರ್ಧನ್‌, ಪ್ರಮುಖರಾದ ಗುಳ್ಕಾಡು ಭಾಸ್ಕರ ಶೆಟ್ಟಿ, ಶಶಿಕಲಾ ದಿನೇಶ್‌ ಪೂಜಾರಿ, ವಿಶು ಕುಮಾರ್‌ ಮುದ್ರಾಡಿ, ಸುಂದರ ಶಿರೂರು ಮುಂತಾದವರು ಉಪಸ್ಥಿತರಿದ್ದರು.

Click to comment

Leave a Reply

Your email address will not be published. Required fields are marked *

Advertisement

Trending

You May Also Like

error: Content is protected !!