ಮಣಿಪಾಲ : ಶಿವಮೊಗ್ಗದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ವಿಶ್ವ ಹಿಂದೂ ಪರಿಷತ್, ಬಜರಂಗದಳದಿಂದ ಪ್ರತಿಭಟನಾ ಮೆರವಣಿಗೆ ನಡೆಯಿತು.
ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಮೆರವಣಿಗೆ ಸಾಗಿತು. ಈ ವೇಳೆ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ನೂರಾರು ಮಂದಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.