ಬೆಂಗಳೂರು: ಕರ್ನಾಟಕ ಹೈಕೋರ್ಟ್ ನಲ್ಲಿ ಇಂದು 11ನೇ ದಿನದ ಹಿಜಾಬ್ ಅನುಮತಿ ಕೋರಿದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಹಿಜಾಬ್ ಅನುಮತಿ ಕೋರಿದಂತ ವಾದ ಮಂಡನೆ ಮುಕ್ತಾಯಗೊಂಡಿದ್ದು, ಹೈಕೋರ್ಟ್ ತ್ರಿಸದಸ್ಯ ಪೀಠವು, ತನ್ನ ತೀರ್ಪನ್ನು ಕಾಯ್ದಿರಿಸಿದೆ.
ಮುಖ್ಯ ನ್ಯಾಯಮೂರ್ತಿ ರಿತು ರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ನ್ಯಾಯಮೂರ್ತಿ ಜೆಎಂ ಖಾಜಿ ಅವರನ್ನೊಳಗೊಂಡ ಪೂರ್ಣ ಪೀಠದ ಮುಂದೆ 11 ದಿನದ ವಿಚಾರಣೆ ಇಂದು ನಡೆಯಿತು.
ಹಿಜಾಬ್ ಧರಿಸಿದ್ದಕ್ಕಾಗಿ ಸರ್ಕಾರಿ ಪಿಯು ಕಾಲೇಜಿನ ಪ್ರವೇಶವನ್ನು ನಿರಾಕರಿಸಿದ ಕ್ರಮವನ್ನು ಪ್ರಶ್ನಿಸಿ ಮುಸ್ಲಿಂ ಬಾಲಕಿ ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳಲ್ಲಿ ಕರ್ನಾಟಕ ಹೈಕೋರ್ಟ್ ನ ಪೂರ್ಣ ಪೀಠವು ಇಂದು ತನ್ನ ತೀರ್ಪನ್ನು ಕಾಯ್ದಿರಿಸಿದೆ.
Advertisement. Scroll to continue reading.

In this article:Diksoochi news, Diksoochi t v, diksoochi udupi, high court, Hijab controversy
Click to comment

































