ಹೆಬ್ರಿ : ಬೇಳಂಜೆ ಮಲ್ಲಿಕಾರ್ಜುನ ದೇವಸ್ಥಾನದ ರಥೋತ್ಸವ : ರಥ ಎಳೆದ ಸಚಿವ ಸಿ.ಎನ್.ಅಶ್ವತ್ ನಾರಾಯಣ
Published
2
ವರದಿ : ಶ್ರೀದತ್ತ ಹೆಬ್ರಿ
ಹೆಬ್ರಿ : ಬೇಳಂಜೆಯ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಬುಧವಾರ ನಡೆದ ವಾರ್ಷಿಕ ರಥೋತ್ಸವಕ್ಕೆ ಉನ್ನತ ಶಿಕ್ಷಣ ಸಚಿವರಾದ ಸಿ.ಎನ್. ಅಶ್ವತ್ ನಾರಾಯಣ ಅವರು ಆಗಮಿಸಿದರು.
ಹೇರ್ಗ ರಾಘವೇಂದ್ರ ತಂತ್ರಿ ಅವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ನೀಡಿ ಸಚಿವ ಅಶ್ವಥ್ ನಾರಾಯಣ ಅವರನ್ನು ಗೌರವಿಸಿದರು.
ಬಳಿಕ ನಡೆದ ರಥೋತ್ಸವದಲ್ಲಿ ರಥವನ್ನು ಎಳೆದು ಬೇಳಂಜೆಗೆ ಆಗಮಿಸಿದ ನೆನಪಿಗೆ ಹೂವಿನ ಗಿಡ ನೆಟ್ಟರು.
ದೇವಸ್ಥಾನದ ಆಡಳಿತ ಮಂಡಳಿಯ ಗಣೇಶ ಹೆಗ್ಡೆ, ಅರ್ಚಕ ರಂಗನಾಥ ಭಟ್, ಹೆಬ್ರಿ ತಹಶೀಲ್ಧಾರ್ ಪುರಂದರ್ ಎಸ್, ತಾಲ್ಲೂಕು ಪಂಚಾಯತಿ ಮಾಜಿ ಸದಸ್ಯ ಅಮೃತ್ ಕುಮಾರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.