ಬೈಂದೂರು : ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಸೇತುವೆ, ಕಿಂಡಿ ಆಣೆಕಟ್ಟು ನಿರ್ಮಾಣಕ್ಕೆ ಭೂಮಿ ಪೂಜೆ
Published
0
ವರದಿ : ದಿನೇಶ್ ರಾಯಪ್ಪನಮಠ
ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ನಾಡ ಗ್ರಾಮ ಪಂಚಾಯತ್ ವ್ಯಾಪ್ತಿಯ ಹಡವು ಹೆಬ್ಬಾರ್ ಸಾಲು ಎಂಬಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ಮತ್ತು ನಾಡ ಪರಂಕಳಿ ಎಂಬಲ್ಲಿ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ಒಟ್ಟು ರೂ. 1.73 ಕೋಟಿ ಹಾಗೂ ಬಡಾಕೆರೆಯಿಂದ ಅರೆಹೊಳೆ ಹೋಗುವ ರಸ್ತೆ, ಸೇನಾಪುರ ಬೆಳ್ಳಾಡಿಗೆ ಹೋಗುವ ರಸ್ತೆ ಮತ್ತು ಜಡ್ಡಾಡಿಗೆ ಹೋಗುವ ರಸ್ತೆಗಳಿಗೆ ಒಟ್ಟು ರೂ. 1.50 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಬಿ. ಎಮ್. ಸುಕುಮಾರ ಶೆಟ್ಟಿಯವರು ಭೂಮಿ ಪೂಜೆಯನ್ನು ನೇರವೇರಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಪ್ರಮುಖರು, ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು.