ಬೆಂಗಳೂರು: ಇದುವರೆಗೆ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಎಂಎಲ್ಸಿ ಸಿಎಂ ಇಬ್ರಾಹಿಂ ಅಧಿಕೃತವಾಗಿ ಹೇಳಿರಲಿಲ್ಲ. ಇದೀಗ ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿ, ಶೀಘ್ರವೇ ಜೆಡಿಎಸ್ ಸೇರ್ಪಡೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಅವರು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರಿಗೆ ಯಾವುದೇ ಸ್ಥಾನಮಾನ ಕೊಡ್ತಾ ಇಲ್ಲ. ಮುಸ್ಲಿಂರನ್ನು ಗೌರವದಿಂದಲೂ ನಡೆಸಿಕೊಳ್ಳುತ್ತಿಲ್ಲ. ಬರೀ ನಮ್ಮನ್ನು ಬಳಸಿಕೊಳ್ಳುತ್ತಿದೆ. ನಾನು ಕಾಂಗ್ರೆಸ್ ಪಕ್ಷವನ್ನು ತೊರೆಯಲು ನಿರ್ಧರಿಸಿದ್ದೇನೆ. ಎಂಎಲ್ಸಿ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರ ಮಾಡಿದ್ದೇನ. ರಾಜೀನಾಮೆ ಪತ್ರವನ್ನು ಸಿದ್ಧರಾಮಯ್ಯನವರಿಗೆ ಕಳುಹಿಸುತ್ತೇನೆ. ಅದನ್ನು ಅಂಗೀಕರಿಸೋದು, ಬಿಡೋದು ಅವರಿಗೆ ಸೇರಿದ್ದು ಎಂದು ತಿಳಿಸಿದರು.

ನನ್ನ ಜೊತೆಗೆ ಅನೇಕ ಕಾಂಗ್ರೆಸ್ ಮುಖಂಡರು ಪಕ್ಷವನ್ನು ತೊರೆಯಲಿದ್ದಾರೆ ಎಂದು ಹೇಳಿರುವ ಅವರು,
ಕಾಂಗ್ರೆಸ್ ನ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿಕೆ ಶಿವಕುಮಾರ್, ಸಿದ್ಧರಾಮಯ್ಯ ಅವರಿಗೆ ಧನ್ಯವಾದ. ಮುಂದೆ ದೇವೇಗೌಡರು, ಕುಮಾರಸ್ವಾಮಿ, ರೇವಣ್ಣ ಜೊತೆಗೆ ಚರ್ಚಿಸಿ, ಜೆಡಿಎಸ್ ಪಕ್ಷ ಸೇರುವ ಬಗ್ಗೆ ನಿರ್ಧಾರ ಪ್ರಕಟಿಸುವುದಾಗಿ ಅವರು ತಿಳಿಸಿದ್ದಾರೆ.
